25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

ಬೆಳ್ತಂಗಡಿ : ತನ್ನ ಮನೆಯ ಸಾಕು ನಾಯಿ ಜೊತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಎ.18 ರಂದು ಮಧ್ಯಾಹ್ನ ನಡೆದಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್ ನಿವಾಸಿ ದಿ. ರಾಮ್ ದಾಸ್ ಪ್ರಭು ಅವರ ಪತ್ನಿ ಪೂರ್ಣಿಮಾ (49) ಎಂಬವರು ತನ್ನ ಮನೆಯ ಸಾಕು ನಾಯಿಯ ದಾಳಿಯಿಂದ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದಾರೆ.

ಪೂರ್ಣಿಮಾ ತನ್ನ ಮನೆಯಲ್ಲಿ ಸಾಕಿದ್ದ ಸಾಕು ನಾಯಿ ಜೊತೆ ಎಂದಿನಂತೆ ಎ.18 ರಂದು ಮುದ್ದಾಡುತ್ತಿದ್ದರು. ಈ ವೇಳೆ ಮಹಿಳೆ ಕಾಲು ಜಾರಿ ನೆಲಕ್ಕೆ ಬಿದ್ದಿದ್ದು ಈ ಸಮಯ ಸಾಕು ನಾಯಿ ಮಹಿಳೆಯ ಮೇಲೆ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿದ್ದು. ಕೈಗೆ ಕಚ್ಚಿ ಗಂಭೀರ ಗಾಯಮಾಡಿದೆ ಎಂದು ಹೇಳಲಾಗುತ್ತಿದೆ.ಮನೆಯವರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುತ್ತಿದ್ದಾರೆ‌.

Related posts

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಪ.ಪೂ. ಕಾಲೇಜಿನ ಸಾತ್ವಿಗೆ 583 ಅಂಕ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya
error: Content is protected !!