ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

ಬೆಳ್ತಂಗಡಿ : ತನ್ನ ಮನೆಯ ಸಾಕು ನಾಯಿ ಜೊತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಎ.18 ರಂದು ಮಧ್ಯಾಹ್ನ ನಡೆದಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್ ನಿವಾಸಿ ದಿ. ರಾಮ್ ದಾಸ್ ಪ್ರಭು ಅವರ ಪತ್ನಿ ಪೂರ್ಣಿಮಾ (49) ಎಂಬವರು ತನ್ನ ಮನೆಯ ಸಾಕು ನಾಯಿಯ ದಾಳಿಯಿಂದ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದಾರೆ.

ಪೂರ್ಣಿಮಾ ತನ್ನ ಮನೆಯಲ್ಲಿ ಸಾಕಿದ್ದ ಸಾಕು ನಾಯಿ ಜೊತೆ ಎಂದಿನಂತೆ ಎ.18 ರಂದು ಮುದ್ದಾಡುತ್ತಿದ್ದರು. ಈ ವೇಳೆ ಮಹಿಳೆ ಕಾಲು ಜಾರಿ ನೆಲಕ್ಕೆ ಬಿದ್ದಿದ್ದು ಈ ಸಮಯ ಸಾಕು ನಾಯಿ ಮಹಿಳೆಯ ಮೇಲೆ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿದ್ದು. ಕೈಗೆ ಕಚ್ಚಿ ಗಂಭೀರ ಗಾಯಮಾಡಿದೆ ಎಂದು ಹೇಳಲಾಗುತ್ತಿದೆ.ಮನೆಯವರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುತ್ತಿದ್ದಾರೆ‌.

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya
error: Content is protected !!