23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

ಗೇರುಕಟ್ಟೆ : ಹವ್ಯಾಸಿ ಯಕ್ಷಗಾನ ಭಾಗವತರಾದ ಕೊರಗಪ್ಪ ಬಂಗೇರ ಇವರ ಸ್ಮರಣಾರ್ಥ ಸುಧನ್ವ ಮೋಕ್ಷ ತಾಳಮದ್ದಳೆ ಮೆದಿನ ರಾಘವ ಪೂಜಾರಿ ಅವರ ನಿವಾಸದಲ್ಲಿ ಜರಗಿತು .

ಭಾಗವತರಾಗಿ ನಿತೀಶ್.ವೈ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಮತ್ತು ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಗೋಪಾಲ ಶೆಟ್ಟಿ ಕಳೆಂಜ ,ದಿವಾಕರ ಆಚಾರ್ಯ ಗೇರುಕಟ್ಟೆ, ಮಧೂರು ಮೋಹನ ಕಲ್ಲೂರಾಯ, ರಾಘವ. ಎಚ್ ,ರಾಘವ ಪೂಜಾರಿ ಮೆದಿನ ಮತ್ತು ಶಿವಾನಂದ ಭಂಡಾರಿ ಭಾಗವಹಿಸಿದ್ದರು.

ಪ್ರೊ. ಮಧೂರು ಮೋಹನ ಕಲ್ಲೂರಾಯ ಸಂಸ್ಮರಣ ನುಡಿಗಳನ್ನಾಡಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ನಿಯುಕ್ತರಾದ ರಾಘವ. ಎಚ್ ಗೇರುಕಟ್ಟೆ ಇವರನ್ನು ಗೌರವಿಸಲಾಯಿತು. ರಾಘವ ಮೆದಿನ ಕುಟುಂಬಸ್ಥರು ಕಲಾವಿದರನ್ನು ಗೌರವಿಸಿದರು. ರಾಘವ .ಎಚ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya
error: Content is protected !!