24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಬೆಳ್ತಂಗಡಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರು ಅಭ್ಯರ್ಥಿಗಳಿಗೆ ಚುನಾವಣಾ ಬಹಿಷ್ಕಾರದ ಬಿಸಿ ಮುಟ್ಟಿಸಲು ಆರಂಭಿಸಿದ್ದಾರೆ. ಇಂತಹ ಒಂದು ಘಟನೆ ನಾವೂರು ಗ್ರಾಮದಲ್ಲಿ ನಡೆದಿದೆ.
ಕೈಕಂಬದಿಂದ ಹತ್ಯಡ್ಕ , ಬಳ್ಳಿತೋಟ , ಬೋಜಾರ ಸೇರಿದಂತೆ ನಡ ಗ್ರಾಮದ ಮೂಡಾಯಿಬೆಟ್ಟು ಸಂಪರ್ಕಿಸುವ ರಸ್ತೆಯು ಸಂಪೂರ್ಣ ಅವ್ಯವಸ್ಥಿತವಾಗಿದ್ದು ಜನ ಮತ್ತು ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ತಾಲೂಕಿನಲ್ಲಿ 2019 ರಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಕೈಕಂಬದಲ್ಲಿ ಸೇತುವೆಯು ಬಿರುಕು ಬಿಟ್ಟಿದ್ದು, ಈವರೆಗೂ ಯಾವುದೇ ಜನಪ್ರತಿನಿಧಿಗಳು ಈ ಸಮಸ್ಯೆಗೆ ಸ್ಪಂದಿಸಿಲ್ಲ. ಹೀಗಾಗಿ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಸಾರ್ವಜನಿಕರು ಬ್ಯಾನರ್ ಅಳವಡಿಸಿದ್ದರು. ಈ ಹಿನ್ನಲೆ ಸ್ಥಳಕ್ಕೆ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ವೈಜಣ್ಣ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿ ಮತದಾನದಲ್ಲಿ ಭಾಗವಹಿಸಲು ಮನವೊಲಿಸಿದ್ದಾರೆ.


ಸಾರ್ವಜನಿಕರ ಸಮಸ್ಯೆ ಬಗ್ಗೆ ಮಾತನಾಡಿದ ಅಧಿಕಾರಿಗಳು, ಈ ರಸ್ತೆ ಹಾಗೂ ಸೇತುವೆಯನ್ನು ಮುಖ್ಯ ಆದ್ಯತೆಯ ಮೇರೆಗೆ ಪುನರ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು, ಮೇಲಾಧಿಕಾರಿಗಳು ಸೇರಿದಂತೆ ಸರ್ಕಾರಕ್ಕೆ ಪೋಟೋ ಸಮೇತ ವರದಿ ಮಾಡಲಾಗುವುದು, ಚುನಾವಣೆ ಮುಗಿದ ಬಳಿಕ ರಸ್ತೆಯ ಅಭಿವೃದ್ಧಿ ಮಾಡಲಾಗುವುದು ಎಂದು ಅವರು ಸಾರ್ವಜನಿಕರಿಗೆ ಭರವಸೆ ನೀಡಿದರು.


ಅಧಿಕಾರಿಗಳ ಮಾತಿಗೆ ಬೆಲೆ ನೀಡಿದ ಸಾರ್ವಜನಿಕರು ಚುನಾವಣಾ ಬಹಿಷ್ಕಾರದ ಬ್ಯಾನರ್ ಅನ್ನು ತೆರವುಗೊಳಿಸಿ, ಚುನಾವಣೆ ಬಳಿಕ ಕಾಮಗಾರಿ ಕೈಗೊಳ್ಳದಿದ್ದರೆ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕಾರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತು ಕಛೇರಿ ಅಧಿಕ್ಷಕ ಪ್ರಶಾಂತ್ ಬಳೆಂಜ , ನಾವೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಪೂಜಾರಿ , ಸಾರ್ವಜನಿಕರಾದ ಬಂಗಾಡಿ ಸಿಎ ಬ್ಯಾಂಕ್ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಮೇಶ್ ಹತ್ಯಡ್ಕ , ಸುರೇಂದ್ರ ಪೂಜಾರಿ , ಜನಾರ್ದನ ನೈಕ ಸೇರಿದಂತೆ ಹಲವಾರು ಜೊತೆಗಿದ್ದರು.

Related posts

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!