25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

ಬೆಳ್ತಂಗಡಿ : ತನ್ನ ಮನೆಯ ಸಾಕು ನಾಯಿ ಜೊತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಎ.18 ರಂದು ಮಧ್ಯಾಹ್ನ ನಡೆದಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್ ನಿವಾಸಿ ದಿ. ರಾಮ್ ದಾಸ್ ಪ್ರಭು ಅವರ ಪತ್ನಿ ಪೂರ್ಣಿಮಾ (49) ಎಂಬವರು ತನ್ನ ಮನೆಯ ಸಾಕು ನಾಯಿಯ ದಾಳಿಯಿಂದ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದಾರೆ.

ಪೂರ್ಣಿಮಾ ತನ್ನ ಮನೆಯಲ್ಲಿ ಸಾಕಿದ್ದ ಸಾಕು ನಾಯಿ ಜೊತೆ ಎಂದಿನಂತೆ ಎ.18 ರಂದು ಮುದ್ದಾಡುತ್ತಿದ್ದರು. ಈ ವೇಳೆ ಮಹಿಳೆ ಕಾಲು ಜಾರಿ ನೆಲಕ್ಕೆ ಬಿದ್ದಿದ್ದು ಈ ಸಮಯ ಸಾಕು ನಾಯಿ ಮಹಿಳೆಯ ಮೇಲೆ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿದ್ದು. ಕೈಗೆ ಕಚ್ಚಿ ಗಂಭೀರ ಗಾಯಮಾಡಿದೆ ಎಂದು ಹೇಳಲಾಗುತ್ತಿದೆ.ಮನೆಯವರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುತ್ತಿದ್ದಾರೆ‌.

Related posts

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya
error: Content is protected !!