July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

ಬೆಳ್ತಂಗಡಿ : ತನ್ನ ಮನೆಯ ಸಾಕು ನಾಯಿ ಜೊತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಎ.18 ರಂದು ಮಧ್ಯಾಹ್ನ ನಡೆದಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್ ನಿವಾಸಿ ದಿ. ರಾಮ್ ದಾಸ್ ಪ್ರಭು ಅವರ ಪತ್ನಿ ಪೂರ್ಣಿಮಾ (49) ಎಂಬವರು ತನ್ನ ಮನೆಯ ಸಾಕು ನಾಯಿಯ ದಾಳಿಯಿಂದ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದಾರೆ.

ಪೂರ್ಣಿಮಾ ತನ್ನ ಮನೆಯಲ್ಲಿ ಸಾಕಿದ್ದ ಸಾಕು ನಾಯಿ ಜೊತೆ ಎಂದಿನಂತೆ ಎ.18 ರಂದು ಮುದ್ದಾಡುತ್ತಿದ್ದರು. ಈ ವೇಳೆ ಮಹಿಳೆ ಕಾಲು ಜಾರಿ ನೆಲಕ್ಕೆ ಬಿದ್ದಿದ್ದು ಈ ಸಮಯ ಸಾಕು ನಾಯಿ ಮಹಿಳೆಯ ಮೇಲೆ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿದ್ದು. ಕೈಗೆ ಕಚ್ಚಿ ಗಂಭೀರ ಗಾಯಮಾಡಿದೆ ಎಂದು ಹೇಳಲಾಗುತ್ತಿದೆ.ಮನೆಯವರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುತ್ತಿದ್ದಾರೆ‌.

Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya
error: Content is protected !!