23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ನಾರಾವಿ ವಲಯ ದ ಕೊಕ್ರಾಡಿ ಸಾವ್ಯಾ ಕಾರ್ಯಕ್ಷೇತ್ರದ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ರೂಪಾಯಿ ಎರಡು ಲಕ್ಷ ದೇಣಿಗೆಯನ್ನು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಸುರೇಂದ್ರ ಕಂಬಳಿ ಬಲ್ಲೋಲಿಗುತ್ತು, ಜೀರ್ಣೋದ್ದಾರ ಸಮಿತಿಯ ಕಾರ್ಯಾಧ್ಯಕ್ಷ ಪಾರ್ಶ್ವನಾಥ ಬಂಗ ಸಾಲ್ಯಾರ ಗುತ್ತು , ಪ್ರಧಾನ ಕಾರ್ಯದರ್ಶಿ ಸುಂದರ ಪೂಜಾರಿ ಕೊಳ್ಳೋಟ್ಟು ಗುತ್ತು, ಕೋಶಾಧಿಕಾರಿ ಪ್ರಕಾಶ್ ಕುಮಾರ್ ಜೈನ್ ಹೊಸಮನೆ ಗುತ್ತು, ಜೊತೆ ಕಾರ್ಯದರ್ಶಿಗಳಾದ ರವಿ ಪೂಜಾರಿ, ಸದಸ್ಯರಾದ ಜಿನೇಶ್ಚಂದ್ರ ಬಲ್ಲಾಳ್ ಮೂಡುಬೈಲು ಗುತ್ತು, ರಾಜು ಶೆಟ್ಟಿ, ಮಂಜಪ್ಪ ಪೂಜಾರಿ, ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಮಾಜಿ ಅಧ್ಯಕ್ಷ ಕಿಟ್ಟಣ್ಣ ಆಚಾರ್ಯ, ಕೊಕ್ರಾಡಿ, ಸಾವ್ಯ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ನಿಧಿ ಶಶಿಧರ್ ಕುಲಾಲ್ ಉಪಸ್ಥಿತರಿದ್ದರು.

Related posts

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ಸೇವಾ ನಿವೃತ್ತಿ ಅಂಗವಾಗಿ ಉಷಾ ವಿ. ರವರಿಗೆ ಬೀಳ್ಕೊಡುಗೆ

Suddi Udaya

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya
error: Content is protected !!