July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಬೆಳ್ತಂಗಡಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರು ಅಭ್ಯರ್ಥಿಗಳಿಗೆ ಚುನಾವಣಾ ಬಹಿಷ್ಕಾರದ ಬಿಸಿ ಮುಟ್ಟಿಸಲು ಆರಂಭಿಸಿದ್ದಾರೆ. ಇಂತಹ ಒಂದು ಘಟನೆ ನಾವೂರು ಗ್ರಾಮದಲ್ಲಿ ನಡೆದಿದೆ.
ಕೈಕಂಬದಿಂದ ಹತ್ಯಡ್ಕ , ಬಳ್ಳಿತೋಟ , ಬೋಜಾರ ಸೇರಿದಂತೆ ನಡ ಗ್ರಾಮದ ಮೂಡಾಯಿಬೆಟ್ಟು ಸಂಪರ್ಕಿಸುವ ರಸ್ತೆಯು ಸಂಪೂರ್ಣ ಅವ್ಯವಸ್ಥಿತವಾಗಿದ್ದು ಜನ ಮತ್ತು ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ತಾಲೂಕಿನಲ್ಲಿ 2019 ರಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಕೈಕಂಬದಲ್ಲಿ ಸೇತುವೆಯು ಬಿರುಕು ಬಿಟ್ಟಿದ್ದು, ಈವರೆಗೂ ಯಾವುದೇ ಜನಪ್ರತಿನಿಧಿಗಳು ಈ ಸಮಸ್ಯೆಗೆ ಸ್ಪಂದಿಸಿಲ್ಲ. ಹೀಗಾಗಿ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಸಾರ್ವಜನಿಕರು ಬ್ಯಾನರ್ ಅಳವಡಿಸಿದ್ದರು. ಈ ಹಿನ್ನಲೆ ಸ್ಥಳಕ್ಕೆ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ವೈಜಣ್ಣ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿ ಮತದಾನದಲ್ಲಿ ಭಾಗವಹಿಸಲು ಮನವೊಲಿಸಿದ್ದಾರೆ.


ಸಾರ್ವಜನಿಕರ ಸಮಸ್ಯೆ ಬಗ್ಗೆ ಮಾತನಾಡಿದ ಅಧಿಕಾರಿಗಳು, ಈ ರಸ್ತೆ ಹಾಗೂ ಸೇತುವೆಯನ್ನು ಮುಖ್ಯ ಆದ್ಯತೆಯ ಮೇರೆಗೆ ಪುನರ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು, ಮೇಲಾಧಿಕಾರಿಗಳು ಸೇರಿದಂತೆ ಸರ್ಕಾರಕ್ಕೆ ಪೋಟೋ ಸಮೇತ ವರದಿ ಮಾಡಲಾಗುವುದು, ಚುನಾವಣೆ ಮುಗಿದ ಬಳಿಕ ರಸ್ತೆಯ ಅಭಿವೃದ್ಧಿ ಮಾಡಲಾಗುವುದು ಎಂದು ಅವರು ಸಾರ್ವಜನಿಕರಿಗೆ ಭರವಸೆ ನೀಡಿದರು.


ಅಧಿಕಾರಿಗಳ ಮಾತಿಗೆ ಬೆಲೆ ನೀಡಿದ ಸಾರ್ವಜನಿಕರು ಚುನಾವಣಾ ಬಹಿಷ್ಕಾರದ ಬ್ಯಾನರ್ ಅನ್ನು ತೆರವುಗೊಳಿಸಿ, ಚುನಾವಣೆ ಬಳಿಕ ಕಾಮಗಾರಿ ಕೈಗೊಳ್ಳದಿದ್ದರೆ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕಾರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತು ಕಛೇರಿ ಅಧಿಕ್ಷಕ ಪ್ರಶಾಂತ್ ಬಳೆಂಜ , ನಾವೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಪೂಜಾರಿ , ಸಾರ್ವಜನಿಕರಾದ ಬಂಗಾಡಿ ಸಿಎ ಬ್ಯಾಂಕ್ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಮೇಶ್ ಹತ್ಯಡ್ಕ , ಸುರೇಂದ್ರ ಪೂಜಾರಿ , ಜನಾರ್ದನ ನೈಕ ಸೇರಿದಂತೆ ಹಲವಾರು ಜೊತೆಗಿದ್ದರು.

Related posts

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya
error: Content is protected !!