ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

ಬೆಳ್ತಂಗಡಿ : ತನ್ನ ಮನೆಯ ಸಾಕು ನಾಯಿ ಜೊತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಎ.18 ರಂದು ಮಧ್ಯಾಹ್ನ ನಡೆದಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್ ನಿವಾಸಿ ದಿ. ರಾಮ್ ದಾಸ್ ಪ್ರಭು ಅವರ ಪತ್ನಿ ಪೂರ್ಣಿಮಾ (49) ಎಂಬವರು ತನ್ನ ಮನೆಯ ಸಾಕು ನಾಯಿಯ ದಾಳಿಯಿಂದ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದಾರೆ.

ಪೂರ್ಣಿಮಾ ತನ್ನ ಮನೆಯಲ್ಲಿ ಸಾಕಿದ್ದ ಸಾಕು ನಾಯಿ ಜೊತೆ ಎಂದಿನಂತೆ ಎ.18 ರಂದು ಮುದ್ದಾಡುತ್ತಿದ್ದರು. ಈ ವೇಳೆ ಮಹಿಳೆ ಕಾಲು ಜಾರಿ ನೆಲಕ್ಕೆ ಬಿದ್ದಿದ್ದು ಈ ಸಮಯ ಸಾಕು ನಾಯಿ ಮಹಿಳೆಯ ಮೇಲೆ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿದ್ದು. ಕೈಗೆ ಕಚ್ಚಿ ಗಂಭೀರ ಗಾಯಮಾಡಿದೆ ಎಂದು ಹೇಳಲಾಗುತ್ತಿದೆ.ಮನೆಯವರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುತ್ತಿದ್ದಾರೆ‌.

Related posts

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ರಾಜ್ಯ ಮಟ್ಟದ ಅಧ್ಯಾಪಕರ ತರಬೇತಿ ಕಾರ್ಯಕ್ರಮ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ವೇಣೂರು ಕಂಬಳದಡ್ಡ ನಿವಾಸಿ ಗಿರಿಜಾ ನಿಧನ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya
error: Content is protected !!