23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

ಬೆಳ್ತಂಗಡಿ : ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಮರ ಮತ್ತು ಕಟ್ಟಿಗೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ಸಂತೋಷ್ ಶೆಟ್ಟಿ ಎಂಬವರಿಗೆ ಸೇರಿದ ಜಾಗದಲ್ಲಿ ಯಾವುದೇ ಅನುಮತಿ ಪಡೆಯದೆ ಮರಗಳನ್ನು ಕಡಿದು ಹಾಕಿ ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಎ.17 ರಂದು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ನೇತೃತ್ವದ ಸಿಬ್ಬಂದಿಗಳ ತಂಡ ದಾಳಿ ಮಾಡಿದ್ದಾರೆ.

ಈ ವೇಳೆ ಕಡಿದು ಹಾಕಿದ ಹಲಸು, ಮರುವ ,ಮಾವು ಜಾತಿಯ 10 ದಿಮ್ಮಿಗಳು 2.604 ಘ.ಮೀ ಮತ್ತು ಕಟ್ಟಿಗೆ 3.000 ಘ.ಮೀ ಇದರ ಅಂದಾಜು ಮೌಲ್ಯ 50,000 ಅಗಿದ್ದು ಎಲ್ಲವನ್ನು ವಶಪಡಿಸಿಕೊಂಡಿದ್ದಾರೆ ಪರವಾನಿಗೆ ಪಡೆಯದೆ ಮರ ಕಡಿದ ಪ್ರಕರಣದ ಪ್ರಕರಣದಲ್ಲಿ ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ನಾರಾಯಣ ಶೆಟ್ಟಿ ಮಗ ಸಂತೋಷ್ ಕುಮಾರ್ ಶೆಟ್ಟಿ ಮತ್ತು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಮಂಜೋಟ್ಟಿ ನಿವಾಸಿ ಇಬ್ರಾಹಿಂ ಬ್ಯಾರಿ@ ತಮ್ಮೋನು ವಿರುದ್ದ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ಹಾಗೂ DRFO ರವಿಚಂದ್ರ, ಲೋಕೇಶ್ ಮತ್ತು ಸಿಬ್ಬಂದಿ ಭಾಗವಹಿಸಿದರು.

Related posts

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮುಗೇರಡ್ಕ ಚಂದ್ರಹಾಸ ಪೂಜಾರಿ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

Suddi Udaya
error: Content is protected !!