ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

ಬೆಳ್ತಂಗಡಿ : ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಮರ ಮತ್ತು ಕಟ್ಟಿಗೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ಸಂತೋಷ್ ಶೆಟ್ಟಿ ಎಂಬವರಿಗೆ ಸೇರಿದ ಜಾಗದಲ್ಲಿ ಯಾವುದೇ ಅನುಮತಿ ಪಡೆಯದೆ ಮರಗಳನ್ನು ಕಡಿದು ಹಾಕಿ ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಎ.17 ರಂದು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ನೇತೃತ್ವದ ಸಿಬ್ಬಂದಿಗಳ ತಂಡ ದಾಳಿ ಮಾಡಿದ್ದಾರೆ.

ಈ ವೇಳೆ ಕಡಿದು ಹಾಕಿದ ಹಲಸು, ಮರುವ ,ಮಾವು ಜಾತಿಯ 10 ದಿಮ್ಮಿಗಳು 2.604 ಘ.ಮೀ ಮತ್ತು ಕಟ್ಟಿಗೆ 3.000 ಘ.ಮೀ ಇದರ ಅಂದಾಜು ಮೌಲ್ಯ 50,000 ಅಗಿದ್ದು ಎಲ್ಲವನ್ನು ವಶಪಡಿಸಿಕೊಂಡಿದ್ದಾರೆ ಪರವಾನಿಗೆ ಪಡೆಯದೆ ಮರ ಕಡಿದ ಪ್ರಕರಣದ ಪ್ರಕರಣದಲ್ಲಿ ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ನಾರಾಯಣ ಶೆಟ್ಟಿ ಮಗ ಸಂತೋಷ್ ಕುಮಾರ್ ಶೆಟ್ಟಿ ಮತ್ತು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಮಂಜೋಟ್ಟಿ ನಿವಾಸಿ ಇಬ್ರಾಹಿಂ ಬ್ಯಾರಿ@ ತಮ್ಮೋನು ವಿರುದ್ದ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ಹಾಗೂ DRFO ರವಿಚಂದ್ರ, ಲೋಕೇಶ್ ಮತ್ತು ಸಿಬ್ಬಂದಿ ಭಾಗವಹಿಸಿದರು.

Related posts

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

 ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಶಾಲೆಯ ಗೈಡ್ಸ್  ದ್ವಿತೀಯ ಸ್ಥಾನ

Suddi Udaya

ಕಳೆಂಜ: ಅಸೌಖ್ಯದಿಂದ ನಿಧನರಾದ ಕಮಲಾ ಶೀನಪ್ಪ ಗೌಡ ಮತ್ತು ಕುಶಾಲಪ್ಪ ನಾಯ್ಕ ರವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya
error: Content is protected !!