25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

ಬೆಳ್ತಂಗಡಿಯ ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಯವರು ಇಂದು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಶಾಸಕರಾದ ಜೆ ಆರ್ ಲೋಬೋ ಮತ್ತು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಮ್ಮುಖದಲ್ಲಿ ಕಾಂಗ್ರೇಸ್ ಸೇರ್ಪಡೆಗೊಂಡರು. ಇವರ ಜೊತೆಯಲ್ಲಿ ಇವರ ಸಹೋದರ ಪದ್ಮನಾಭ ಶೆಣೈ, ಸಹೋದರಿ ದಿವ್ಯಾಲಕ್ಷ್ಮಿ ಮತ್ತು ರೋಹಿತ್ ನಾಯ್ಕ ರವರು ಕಾಂಗ್ರೇಸ್ ಪಕ್ಷವನ್ನು ಸೇರಿದರು.

ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ವಕ್ತಾರರಾದ ಎ ಸಿ ವಿನಯರಾಜ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ಸತೀಶ್ ಬಂಗೇರ, ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಚುನಾವಣಾ ಉಸ್ತುವಾರಿ , ಧರಣೇಂದ್ರ ಕುಮಾರ್, ಪ್ರಚಾರ ಸಮಿತಿ ಉಸ್ತುವಾರಿ ಶೇಖರ್ ಕುಕ್ಕೇಡಿ, ಲೋಕೇಶ್ವರಿ ವಿನಯಚಂದ್ರ, ಉಭಯ ಅಲ್ಪಸಂಖ್ಯಾತ ಕಾಂಗ್ರೇಸ್ ಘಟಕ ಅಧ್ಯಕ್ಷರುಗಳಾದ ಕರೀಂ ಗೇರುಕಟ್ಟೆ, ಜೈಸನ್ ಪಟ್ಟೇರಿ, ಉಭಯ ಬ್ಲಾಕ್ ಮಹಿಳಾ ಕಾಂಗ್ರೇಸ್ ಘಟಕದ ಅಧ್ಯಕ್ಷರುಗಳಾದ ನಮಿತಾ ಕೆ ಪೂಜಾರಿ ಮತ್ತು ವಂದನಾ ಭಂಡಾರಿ, ಬ್ಲಾಕ್ ಕಾಂಗ್ರೇಸ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಮುಂತಾದವರು ಉಪಸ್ಥಿತರಿದ್ದರು.

Related posts

ಎಸ್‌ಐಆ‌ರ್ ವೇಳಾಪಟ್ಟಿ ಪರಿಷ್ಕರಣೆ: ಆ.8ರ ತನಕ ವಿಸ್ತರಣೆ

Suddi Udaya

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya
error: Content is protected !!