23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

ಬೆಳ್ತಂಗಡಿ : ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಮರ ಮತ್ತು ಕಟ್ಟಿಗೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ಸಂತೋಷ್ ಶೆಟ್ಟಿ ಎಂಬವರಿಗೆ ಸೇರಿದ ಜಾಗದಲ್ಲಿ ಯಾವುದೇ ಅನುಮತಿ ಪಡೆಯದೆ ಮರಗಳನ್ನು ಕಡಿದು ಹಾಕಿ ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಎ.17 ರಂದು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ನೇತೃತ್ವದ ಸಿಬ್ಬಂದಿಗಳ ತಂಡ ದಾಳಿ ಮಾಡಿದ್ದಾರೆ.

ಈ ವೇಳೆ ಕಡಿದು ಹಾಕಿದ ಹಲಸು, ಮರುವ ,ಮಾವು ಜಾತಿಯ 10 ದಿಮ್ಮಿಗಳು 2.604 ಘ.ಮೀ ಮತ್ತು ಕಟ್ಟಿಗೆ 3.000 ಘ.ಮೀ ಇದರ ಅಂದಾಜು ಮೌಲ್ಯ 50,000 ಅಗಿದ್ದು ಎಲ್ಲವನ್ನು ವಶಪಡಿಸಿಕೊಂಡಿದ್ದಾರೆ ಪರವಾನಿಗೆ ಪಡೆಯದೆ ಮರ ಕಡಿದ ಪ್ರಕರಣದ ಪ್ರಕರಣದಲ್ಲಿ ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ನಾರಾಯಣ ಶೆಟ್ಟಿ ಮಗ ಸಂತೋಷ್ ಕುಮಾರ್ ಶೆಟ್ಟಿ ಮತ್ತು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಮಂಜೋಟ್ಟಿ ನಿವಾಸಿ ಇಬ್ರಾಹಿಂ ಬ್ಯಾರಿ@ ತಮ್ಮೋನು ವಿರುದ್ದ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ಹಾಗೂ DRFO ರವಿಚಂದ್ರ, ಲೋಕೇಶ್ ಮತ್ತು ಸಿಬ್ಬಂದಿ ಭಾಗವಹಿಸಿದರು.

Related posts

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ

Suddi Udaya
error: Content is protected !!