23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

ಬೆಳ್ತಂಗಡಿ : ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಮರ ಮತ್ತು ಕಟ್ಟಿಗೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ಸಂತೋಷ್ ಶೆಟ್ಟಿ ಎಂಬವರಿಗೆ ಸೇರಿದ ಜಾಗದಲ್ಲಿ ಯಾವುದೇ ಅನುಮತಿ ಪಡೆಯದೆ ಮರಗಳನ್ನು ಕಡಿದು ಹಾಕಿ ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಎ.17 ರಂದು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ನೇತೃತ್ವದ ಸಿಬ್ಬಂದಿಗಳ ತಂಡ ದಾಳಿ ಮಾಡಿದ್ದಾರೆ.

ಈ ವೇಳೆ ಕಡಿದು ಹಾಕಿದ ಹಲಸು, ಮರುವ ,ಮಾವು ಜಾತಿಯ 10 ದಿಮ್ಮಿಗಳು 2.604 ಘ.ಮೀ ಮತ್ತು ಕಟ್ಟಿಗೆ 3.000 ಘ.ಮೀ ಇದರ ಅಂದಾಜು ಮೌಲ್ಯ 50,000 ಅಗಿದ್ದು ಎಲ್ಲವನ್ನು ವಶಪಡಿಸಿಕೊಂಡಿದ್ದಾರೆ ಪರವಾನಿಗೆ ಪಡೆಯದೆ ಮರ ಕಡಿದ ಪ್ರಕರಣದ ಪ್ರಕರಣದಲ್ಲಿ ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ನಾರಾಯಣ ಶೆಟ್ಟಿ ಮಗ ಸಂತೋಷ್ ಕುಮಾರ್ ಶೆಟ್ಟಿ ಮತ್ತು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಮಂಜೋಟ್ಟಿ ನಿವಾಸಿ ಇಬ್ರಾಹಿಂ ಬ್ಯಾರಿ@ ತಮ್ಮೋನು ವಿರುದ್ದ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ಹಾಗೂ DRFO ರವಿಚಂದ್ರ, ಲೋಕೇಶ್ ಮತ್ತು ಸಿಬ್ಬಂದಿ ಭಾಗವಹಿಸಿದರು.

Related posts

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಮಾಂಡೋವಿ ಮೋಟಾರ್ಸ್ ನಿಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya
error: Content is protected !!