July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

ಬೆಳ್ತಂಗಡಿ : ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಮರ ಮತ್ತು ಕಟ್ಟಿಗೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ಸಂತೋಷ್ ಶೆಟ್ಟಿ ಎಂಬವರಿಗೆ ಸೇರಿದ ಜಾಗದಲ್ಲಿ ಯಾವುದೇ ಅನುಮತಿ ಪಡೆಯದೆ ಮರಗಳನ್ನು ಕಡಿದು ಹಾಕಿ ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಎ.17 ರಂದು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ನೇತೃತ್ವದ ಸಿಬ್ಬಂದಿಗಳ ತಂಡ ದಾಳಿ ಮಾಡಿದ್ದಾರೆ.

ಈ ವೇಳೆ ಕಡಿದು ಹಾಕಿದ ಹಲಸು, ಮರುವ ,ಮಾವು ಜಾತಿಯ 10 ದಿಮ್ಮಿಗಳು 2.604 ಘ.ಮೀ ಮತ್ತು ಕಟ್ಟಿಗೆ 3.000 ಘ.ಮೀ ಇದರ ಅಂದಾಜು ಮೌಲ್ಯ 50,000 ಅಗಿದ್ದು ಎಲ್ಲವನ್ನು ವಶಪಡಿಸಿಕೊಂಡಿದ್ದಾರೆ ಪರವಾನಿಗೆ ಪಡೆಯದೆ ಮರ ಕಡಿದ ಪ್ರಕರಣದ ಪ್ರಕರಣದಲ್ಲಿ ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ನಾರಾಯಣ ಶೆಟ್ಟಿ ಮಗ ಸಂತೋಷ್ ಕುಮಾರ್ ಶೆಟ್ಟಿ ಮತ್ತು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಮಂಜೋಟ್ಟಿ ನಿವಾಸಿ ಇಬ್ರಾಹಿಂ ಬ್ಯಾರಿ@ ತಮ್ಮೋನು ವಿರುದ್ದ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ಹಾಗೂ DRFO ರವಿಚಂದ್ರ, ಲೋಕೇಶ್ ಮತ್ತು ಸಿಬ್ಬಂದಿ ಭಾಗವಹಿಸಿದರು.

Related posts

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!