23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

ಬೆಳ್ತಂಗಡಿಯ ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಯವರು ಇಂದು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಶಾಸಕರಾದ ಜೆ ಆರ್ ಲೋಬೋ ಮತ್ತು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಮ್ಮುಖದಲ್ಲಿ ಕಾಂಗ್ರೇಸ್ ಸೇರ್ಪಡೆಗೊಂಡರು. ಇವರ ಜೊತೆಯಲ್ಲಿ ಇವರ ಸಹೋದರ ಪದ್ಮನಾಭ ಶೆಣೈ, ಸಹೋದರಿ ದಿವ್ಯಾಲಕ್ಷ್ಮಿ ಮತ್ತು ರೋಹಿತ್ ನಾಯ್ಕ ರವರು ಕಾಂಗ್ರೇಸ್ ಪಕ್ಷವನ್ನು ಸೇರಿದರು.

ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ವಕ್ತಾರರಾದ ಎ ಸಿ ವಿನಯರಾಜ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ಸತೀಶ್ ಬಂಗೇರ, ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಚುನಾವಣಾ ಉಸ್ತುವಾರಿ , ಧರಣೇಂದ್ರ ಕುಮಾರ್, ಪ್ರಚಾರ ಸಮಿತಿ ಉಸ್ತುವಾರಿ ಶೇಖರ್ ಕುಕ್ಕೇಡಿ, ಲೋಕೇಶ್ವರಿ ವಿನಯಚಂದ್ರ, ಉಭಯ ಅಲ್ಪಸಂಖ್ಯಾತ ಕಾಂಗ್ರೇಸ್ ಘಟಕ ಅಧ್ಯಕ್ಷರುಗಳಾದ ಕರೀಂ ಗೇರುಕಟ್ಟೆ, ಜೈಸನ್ ಪಟ್ಟೇರಿ, ಉಭಯ ಬ್ಲಾಕ್ ಮಹಿಳಾ ಕಾಂಗ್ರೇಸ್ ಘಟಕದ ಅಧ್ಯಕ್ಷರುಗಳಾದ ನಮಿತಾ ಕೆ ಪೂಜಾರಿ ಮತ್ತು ವಂದನಾ ಭಂಡಾರಿ, ಬ್ಲಾಕ್ ಕಾಂಗ್ರೇಸ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಮುಂತಾದವರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಅಳದಂಗಡಿಯಲ್ಲಿ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!