July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್, (ಸ್ವಾಯತ್ತ) ಉಜಿರೆ ಇಲ್ಲಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಮಡಂತ್ಯಾರ್ ಇದರ ಸಹಯೋಗದಲ್ಲಿ ವಿದ್ಯಾರ್ಥಿ ಸಮಾಗಮ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಣ ಫೌಂಡೇಷನ್ ಇದರ ತಾಲೂಕು ಸಂಯೋಜಕರಾದ ಶ್ರೀ. ಅಮೃತ್ ಭಾಗವಹಿಸಿದ್ದರು.

ವಿದ್ಯಾರ್ಥಿಗಳು ತಮ್ಮ ಬೇಸಿಗೆ ರಜೆಯನ್ನು ಯಾವ ರೀತಿಯಾಗಿ ಪರಿಪೂರ್ಣಗೊಳಿಸಬೇಕು ಎಂದು ತಿಳಿಸುತ್ತಾ ರಜೆಯಲ್ಲಿ ಕೇವಲ ಮೊಬೈಲ್ ಬಳಕೆಗೆ ದಾಸರಾಗದೆ, ಸ್ನೇಹಿತರೊಂದಿಗೆ ಸಮಯ ಕಳೆಯಿರಿ ಮತ್ತು ಗ್ರಾಮೀಣ ಆಟೋಟಗಳನ್ನು ಆಡಿ ಆನಂದಿಸಿ ಎಂದು ಸಲಹೆ ನೀಡಿ, ವಿಶಿಷ್ಟ ಚಟುವಟಿಕೆಗಳನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ ಶಿಸ್ತಿನಿಂದ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಡಂತ್ಯಾರ್ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಸರೋಜಿನಿ ಉಪಸ್ಥಿತರಿದ್ದರು. ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಾದ ಶಾಹಿದ್ ಅಫ್ರೀದ್, ರಮಿತ, ವೀಕ್ಷಿತ ಕೋಟ್ಯಾನ್, ವಿಯನ್ನ ವೆನಿಸ ಪಾಯಸ್ ನಡೆಸಿಕೊಟ್ಟರು.

Related posts

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya
error: Content is protected !!