July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

ಬೆಳ್ತಂಗಡಿ : ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಮರ ಮತ್ತು ಕಟ್ಟಿಗೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ಸಂತೋಷ್ ಶೆಟ್ಟಿ ಎಂಬವರಿಗೆ ಸೇರಿದ ಜಾಗದಲ್ಲಿ ಯಾವುದೇ ಅನುಮತಿ ಪಡೆಯದೆ ಮರಗಳನ್ನು ಕಡಿದು ಹಾಕಿ ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಎ.17 ರಂದು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ನೇತೃತ್ವದ ಸಿಬ್ಬಂದಿಗಳ ತಂಡ ದಾಳಿ ಮಾಡಿದ್ದಾರೆ.

ಈ ವೇಳೆ ಕಡಿದು ಹಾಕಿದ ಹಲಸು, ಮರುವ ,ಮಾವು ಜಾತಿಯ 10 ದಿಮ್ಮಿಗಳು 2.604 ಘ.ಮೀ ಮತ್ತು ಕಟ್ಟಿಗೆ 3.000 ಘ.ಮೀ ಇದರ ಅಂದಾಜು ಮೌಲ್ಯ 50,000 ಅಗಿದ್ದು ಎಲ್ಲವನ್ನು ವಶಪಡಿಸಿಕೊಂಡಿದ್ದಾರೆ ಪರವಾನಿಗೆ ಪಡೆಯದೆ ಮರ ಕಡಿದ ಪ್ರಕರಣದ ಪ್ರಕರಣದಲ್ಲಿ ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ನಾರಾಯಣ ಶೆಟ್ಟಿ ಮಗ ಸಂತೋಷ್ ಕುಮಾರ್ ಶೆಟ್ಟಿ ಮತ್ತು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಮಂಜೋಟ್ಟಿ ನಿವಾಸಿ ಇಬ್ರಾಹಿಂ ಬ್ಯಾರಿ@ ತಮ್ಮೋನು ವಿರುದ್ದ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ಹಾಗೂ DRFO ರವಿಚಂದ್ರ, ಲೋಕೇಶ್ ಮತ್ತು ಸಿಬ್ಬಂದಿ ಭಾಗವಹಿಸಿದರು.

Related posts

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

Suddi Udaya

KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya
error: Content is protected !!