25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

ಹತ್ಯಡ್ಕ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ, ವನದುರ್ಗಾ‌ಹೋಮ, ಹಾಗೂ ಅಭಿನಂದನಾ ಸಭೆ, ಭಜನೋತ್ಸವ, ಕಾರ್ಯಕ್ರಮವು ಎ.18 ರಂದು ಜರುಗಿತು.

ನಂತರ ಅಭಿನಂದನಾ ಸಭಾ ಉತ್ತಮ ಪ್ರಾಮಾಣಿಕ ಭಕ್ತಿಯಿಂದ ಸಮಾಜದಲ್ಲಿ ಪುಣ್ಯ ಕಾರ್ಯಗಳು ನೆರೆವೇರುತ್ತದೆ. ಅದಕ್ಕೆ ಮಾದರಿ ನಮ್ಮ ಅರಿಕೆಗುಡ್ದೆ ಪುಣ್ಯಕ್ಷೇತ್ರ. ಸಾವಿರಾರು ಮಂದಿ ಕಾರ್ಯಕರ್ತರ ಅವಿರತ ಶ್ರಮಕ್ಕೆ ಅಭಿನಂದನೆ. ಈ ದೇವಾಲಯದಲ್ಲಿ ಮುಂದೆಯೂ ಸಮಾಜ ಮುಖಿ ಕಾರ್ಯವನ್ನು ಮುಂದುವರಿಸುತ್ತೇವೆ. ಅಲ್ಲದೆ ಅನ್ನದಾನ ಕಾರ್ಯ ಪ್ರಾರಂಭಿಸುತ್ತೇವೆ. ಸಂಪ್ರದಾಯದಂತೆ ಎಲ್ಲಾ ಪುಣ್ಯ ಕಾರ್ಯವನ್ನು ಇಲ್ಲಿ ನಡೆಸುತ್ತೇವೆ ಎಂದು ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಪುಣ್ಯಕ್ಷೇತ್ರದ ದೇವಾಲಯದ ಅಧ್ಯಕ್ಷ ಪಿಲಿಕಬೆ ಪ್ರಕಾಶ್ ಅವರು ಕಾರ್ಯಕರ್ತರಿಗೆ ಅಭಿನಂದನಾ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬ್ರಹ್ಮ‌ಕಲಶ ಅಧ್ಯಕ್ಷ ಶ್ರೀರಂಗ ದಾಮಲೆ, ಶ್ರೀಕರ ರಾವ್, ಸಂಚಾಲಕರಾದ ಜಯರಾಮ ನೆಲ್ಲಿತ್ತಾಯ, ಚಂದ್ರ ಶೇಖರ ಸಾಲ್ಯಾನ್, ದೇವಾಲಯದ ಅರ್ಚಕರು ಮುಂತಾದವರು ಭಾಗವಹಿಸಿ, ಅಭಿನಂದನಾ ಭಾಷಣ ಮಾಡಿದರು.


ನಂತರ ಶ್ರೀ ಕಡಬ ಸುಂದರ ಅವರ ತಂಡದವರಿಂದ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆಯಿತು. ತಾಲೂಕಿನ ವಿವಿಧ ತಂಡಗಳು ಭಾಗವಹಿಸಿದ್ದವು.
ಮುರಳೀಧರ ಸ್ವಾಗತಿಸಿ, ಶ್ರೀಮತಿ ರೇಣುಕಾ ಸುಧೀರ್ ಕಾರ್ಯಕ್ರಮ ನಿರ್ವಹಿಸಿದ್ದರು.

Related posts

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಗೇರುಕಟ್ಟೆ: ಬಾಲಕ ಶವ ಪತ್ತೆ ಪ್ರಕರಣ: ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ: ಸಮಗ್ರ ತನಿಖೆಗೆ ಆಗ್ರಹ

Suddi Udaya
error: Content is protected !!