23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಉಜಿರೆ ಅನುಗ್ರಹ ಪ್ರೈಮರಿ ಶಾಲೆಯ ಸಭಾಂಗಣದಲ್ಲಿ ಎ.18 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಉಜಿರೆ ಸೈಂಟ್‌ ಆಂಟೋನಿ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡೀಸ್, ಉಜಿರೆ ಪ್ರಗತಿ ಮಹಿಳಾ ಮಂಡಲ ಗೌರವ ಸಲಹೆಗಾರರು ಶ್ರೀಮತಿ ಜ್ಯೋತಿ. ಪಿ.ನಾಯಕ್‌, ಉಜಿರೆ ಪ್ರೇರಣಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶೀಲಾ ಮಹಾಬಲ ಉಪಸ್ಥಿತರಿದ್ದರು.

ವ್ಯಂಗ್ಯ ಚಿತ್ರಕಾರ ಸತೀಶ್ ಕಾನತ್ತೂರು, ಶ್ರೀಮತಿ ರೇವತಿ, ಶ್ರೀಮತಿ ಚೇತನಾ, ಶ್ರೀಮತಿ ಅನ್ನಪೂರ್ಣ, ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಇವರನ್ನು ಗೌರವಿಸಲಾಯಿತು.

ಶಿಬಿರಾರ್ಥಿಗಳಾದ ಅನ್ವಿಕಾ ರೋಡ್ರಿಗಸ್, ಶಿವಪ್ರಸಾದ್ ರವರಿಂದ ಶಿಬಿರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಹೆತ್ತವರ ಪರವಾಗಿ ಕ್ಷಮಾ ಭಾರಧ್ವಜ್ ಹಾಗೂ ವ್ಯಂಗ್ಯ ಚಿತ್ರಕಾರರಾದ ಸತೀಶ್ ಕಾನತ್ತೂರು, ಶಿಬಿರದ ಬಗ್ಗೆ ಶೀಲಾ ಮಹಾಬಲ ಹಾಗೂ ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಅನಿಸಿಕೆ ವ್ಯಕ್ತಪಡಿಸಿದರು.

ಶಿಬಿರಾರ್ಥಿಗಳಿಂದ ತಾವು ಕಲಿತಾ ಯೋಗ ಪ್ರದರ್ಶನ ಹಾಗೂ ನೃತ್ಯ ಪ್ರದರ್ಶನವು ನಡೆಯಿತು.

ನೈಮಿಕಾ, ಅನನ್ಯ ಪ್ರಾರ್ಥಿಸಿ, ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಸ್ವಾಗತಿಸಿ, ಗಾಯತ್ರಿ ಶ್ರೀಧರ್ ನಿರೂಪಿಸಿದರು., ಅನ್ನಪೂರ್ಣ ಧನ್ಯವಾದವಿತ್ತರು.

Related posts

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

Suddi Udaya
error: Content is protected !!