23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಉಜಿರೆ ಅನುಗ್ರಹ ಪ್ರೈಮರಿ ಶಾಲೆಯ ಸಭಾಂಗಣದಲ್ಲಿ ಎ.18 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಉಜಿರೆ ಸೈಂಟ್‌ ಆಂಟೋನಿ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡೀಸ್, ಉಜಿರೆ ಪ್ರಗತಿ ಮಹಿಳಾ ಮಂಡಲ ಗೌರವ ಸಲಹೆಗಾರರು ಶ್ರೀಮತಿ ಜ್ಯೋತಿ. ಪಿ.ನಾಯಕ್‌, ಉಜಿರೆ ಪ್ರೇರಣಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶೀಲಾ ಮಹಾಬಲ ಉಪಸ್ಥಿತರಿದ್ದರು.

ವ್ಯಂಗ್ಯ ಚಿತ್ರಕಾರ ಸತೀಶ್ ಕಾನತ್ತೂರು, ಶ್ರೀಮತಿ ರೇವತಿ, ಶ್ರೀಮತಿ ಚೇತನಾ, ಶ್ರೀಮತಿ ಅನ್ನಪೂರ್ಣ, ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಇವರನ್ನು ಗೌರವಿಸಲಾಯಿತು.

ಶಿಬಿರಾರ್ಥಿಗಳಾದ ಅನ್ವಿಕಾ ರೋಡ್ರಿಗಸ್, ಶಿವಪ್ರಸಾದ್ ರವರಿಂದ ಶಿಬಿರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಹೆತ್ತವರ ಪರವಾಗಿ ಕ್ಷಮಾ ಭಾರಧ್ವಜ್ ಹಾಗೂ ವ್ಯಂಗ್ಯ ಚಿತ್ರಕಾರರಾದ ಸತೀಶ್ ಕಾನತ್ತೂರು, ಶಿಬಿರದ ಬಗ್ಗೆ ಶೀಲಾ ಮಹಾಬಲ ಹಾಗೂ ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಅನಿಸಿಕೆ ವ್ಯಕ್ತಪಡಿಸಿದರು.

ಶಿಬಿರಾರ್ಥಿಗಳಿಂದ ತಾವು ಕಲಿತಾ ಯೋಗ ಪ್ರದರ್ಶನ ಹಾಗೂ ನೃತ್ಯ ಪ್ರದರ್ಶನವು ನಡೆಯಿತು.

ನೈಮಿಕಾ, ಅನನ್ಯ ಪ್ರಾರ್ಥಿಸಿ, ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಸ್ವಾಗತಿಸಿ, ಗಾಯತ್ರಿ ಶ್ರೀಧರ್ ನಿರೂಪಿಸಿದರು., ಅನ್ನಪೂರ್ಣ ಧನ್ಯವಾದವಿತ್ತರು.

Related posts

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

Suddi Udaya

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!