September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಉಜಿರೆ ಅನುಗ್ರಹ ಪ್ರೈಮರಿ ಶಾಲೆಯ ಸಭಾಂಗಣದಲ್ಲಿ ಎ.18 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಉಜಿರೆ ಸೈಂಟ್‌ ಆಂಟೋನಿ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡೀಸ್, ಉಜಿರೆ ಪ್ರಗತಿ ಮಹಿಳಾ ಮಂಡಲ ಗೌರವ ಸಲಹೆಗಾರರು ಶ್ರೀಮತಿ ಜ್ಯೋತಿ. ಪಿ.ನಾಯಕ್‌, ಉಜಿರೆ ಪ್ರೇರಣಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶೀಲಾ ಮಹಾಬಲ ಉಪಸ್ಥಿತರಿದ್ದರು.

ವ್ಯಂಗ್ಯ ಚಿತ್ರಕಾರ ಸತೀಶ್ ಕಾನತ್ತೂರು, ಶ್ರೀಮತಿ ರೇವತಿ, ಶ್ರೀಮತಿ ಚೇತನಾ, ಶ್ರೀಮತಿ ಅನ್ನಪೂರ್ಣ, ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಇವರನ್ನು ಗೌರವಿಸಲಾಯಿತು.

ಶಿಬಿರಾರ್ಥಿಗಳಾದ ಅನ್ವಿಕಾ ರೋಡ್ರಿಗಸ್, ಶಿವಪ್ರಸಾದ್ ರವರಿಂದ ಶಿಬಿರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಹೆತ್ತವರ ಪರವಾಗಿ ಕ್ಷಮಾ ಭಾರಧ್ವಜ್ ಹಾಗೂ ವ್ಯಂಗ್ಯ ಚಿತ್ರಕಾರರಾದ ಸತೀಶ್ ಕಾನತ್ತೂರು, ಶಿಬಿರದ ಬಗ್ಗೆ ಶೀಲಾ ಮಹಾಬಲ ಹಾಗೂ ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಅನಿಸಿಕೆ ವ್ಯಕ್ತಪಡಿಸಿದರು.

ಶಿಬಿರಾರ್ಥಿಗಳಿಂದ ತಾವು ಕಲಿತಾ ಯೋಗ ಪ್ರದರ್ಶನ ಹಾಗೂ ನೃತ್ಯ ಪ್ರದರ್ಶನವು ನಡೆಯಿತು.

ನೈಮಿಕಾ, ಅನನ್ಯ ಪ್ರಾರ್ಥಿಸಿ, ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಸ್ವಾಗತಿಸಿ, ಗಾಯತ್ರಿ ಶ್ರೀಧರ್ ನಿರೂಪಿಸಿದರು., ಅನ್ನಪೂರ್ಣ ಧನ್ಯವಾದವಿತ್ತರು.

Related posts

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya
error: Content is protected !!