30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

ಬೆಳ್ತಂಗಡಿ; ಇವತ್ತು ಇನ್ವರ್ಟರ್ ರಿಪೇರಿ ಇದೆ. ಸೈಕಲ್ ನಾಳೆ ಸರಿ ಮಾಡಿಸೋಣ ಎಂದಿದ್ದಕ್ಕೆ 8 ನೇ ತರಗತಿಯ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯದಲ್ಲಿ ನಡೆದಿದೆ.

ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13ವ) ಎಂಬಾತನೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ
ಮನೆಯ ಕಿಟಕಿಗೆ ಹಗ್ಗ ಬಳಸಿ ಕುತ್ತಿಗೆಗೆ ನೇಣು ಬಿಗಿದು ಈ ಕೃತ್ಯ ವೆಸಗಿಕೊಂಡಿದ್ದಾನೆ.

ಬಾಲಕನ ತಂದೆ ಈ‌ ಹಿಂದೆಯೇ ಮೃತ;
ಬಾಲಕನ ತಂದೆ ಪಂಜ ಗ್ರಾಮದ ರೋಹಿತ್ ಗೌಡ ಎಂಬವರು ಈಗಾಗಲೇ ಮೃತಪಟ್ಟಿದ್ದಾರೆ. ತಂದೆಯ ಮರಣದ ನಂತರ ಈತ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ. ಶುಕ್ರವಾರದಂದು ತನ್ನ ನಾಲ್ವರು ಗೆಳೆಯರೊಂದಿಗೆ ಆಟವಾಡುತ್ತಿದ್ದ ಈತ ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮಾವನ ಮನೆಯಲ್ಲಿ ಒತ್ತಾಯಿಸಿದ್ದ. ಅದಕ್ಕೆ ಸ್ಪಂದಿಸಿದ್ದ ಮನೆಯವರು, ಹಾಳಾಗಿದ್ದ ಮನೆಯ ಇನ್ವರ್ಟರ್ ಸರಿಪಡಿಸಿರುವುದರಿಂದ ನಾಳೆ ಸೈಕಲ್ ರಿಪೇರಿ ಮಾಡಿಸೋಣ ಎಂದಿದ್ದರು. ಇದೇ ಕಾರಣಕ್ಕೆ ಮನನೊಂದ ಬಾಲಕ ಈ ಕಠಿಣ ನಿರ್ಧಾರ ಕೈಗೊಂಡಿದ್ದಾನೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಮನೆಯವರು ವಿವರ ನೀಡಿದ್ದಾರೆ‌. ಇದೀಗ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya
error: Content is protected !!