July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

ಹತ್ಯಡ್ಕ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ, ವನದುರ್ಗಾ‌ಹೋಮ, ಹಾಗೂ ಅಭಿನಂದನಾ ಸಭೆ, ಭಜನೋತ್ಸವ, ಕಾರ್ಯಕ್ರಮವು ಎ.18 ರಂದು ಜರುಗಿತು.

ನಂತರ ಅಭಿನಂದನಾ ಸಭಾ ಉತ್ತಮ ಪ್ರಾಮಾಣಿಕ ಭಕ್ತಿಯಿಂದ ಸಮಾಜದಲ್ಲಿ ಪುಣ್ಯ ಕಾರ್ಯಗಳು ನೆರೆವೇರುತ್ತದೆ. ಅದಕ್ಕೆ ಮಾದರಿ ನಮ್ಮ ಅರಿಕೆಗುಡ್ದೆ ಪುಣ್ಯಕ್ಷೇತ್ರ. ಸಾವಿರಾರು ಮಂದಿ ಕಾರ್ಯಕರ್ತರ ಅವಿರತ ಶ್ರಮಕ್ಕೆ ಅಭಿನಂದನೆ. ಈ ದೇವಾಲಯದಲ್ಲಿ ಮುಂದೆಯೂ ಸಮಾಜ ಮುಖಿ ಕಾರ್ಯವನ್ನು ಮುಂದುವರಿಸುತ್ತೇವೆ. ಅಲ್ಲದೆ ಅನ್ನದಾನ ಕಾರ್ಯ ಪ್ರಾರಂಭಿಸುತ್ತೇವೆ. ಸಂಪ್ರದಾಯದಂತೆ ಎಲ್ಲಾ ಪುಣ್ಯ ಕಾರ್ಯವನ್ನು ಇಲ್ಲಿ ನಡೆಸುತ್ತೇವೆ ಎಂದು ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಪುಣ್ಯಕ್ಷೇತ್ರದ ದೇವಾಲಯದ ಅಧ್ಯಕ್ಷ ಪಿಲಿಕಬೆ ಪ್ರಕಾಶ್ ಅವರು ಕಾರ್ಯಕರ್ತರಿಗೆ ಅಭಿನಂದನಾ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬ್ರಹ್ಮ‌ಕಲಶ ಅಧ್ಯಕ್ಷ ಶ್ರೀರಂಗ ದಾಮಲೆ, ಶ್ರೀಕರ ರಾವ್, ಸಂಚಾಲಕರಾದ ಜಯರಾಮ ನೆಲ್ಲಿತ್ತಾಯ, ಚಂದ್ರ ಶೇಖರ ಸಾಲ್ಯಾನ್, ದೇವಾಲಯದ ಅರ್ಚಕರು ಮುಂತಾದವರು ಭಾಗವಹಿಸಿ, ಅಭಿನಂದನಾ ಭಾಷಣ ಮಾಡಿದರು.


ನಂತರ ಶ್ರೀ ಕಡಬ ಸುಂದರ ಅವರ ತಂಡದವರಿಂದ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆಯಿತು. ತಾಲೂಕಿನ ವಿವಿಧ ತಂಡಗಳು ಭಾಗವಹಿಸಿದ್ದವು.
ಮುರಳೀಧರ ಸ್ವಾಗತಿಸಿ, ಶ್ರೀಮತಿ ರೇಣುಕಾ ಸುಧೀರ್ ಕಾರ್ಯಕ್ರಮ ನಿರ್ವಹಿಸಿದ್ದರು.

Related posts

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya
error: Content is protected !!