22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಉಜಿರೆ ಅನುಗ್ರಹ ಪ್ರೈಮರಿ ಶಾಲೆಯ ಸಭಾಂಗಣದಲ್ಲಿ ಎ.18 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಉಜಿರೆ ಸೈಂಟ್‌ ಆಂಟೋನಿ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡೀಸ್, ಉಜಿರೆ ಪ್ರಗತಿ ಮಹಿಳಾ ಮಂಡಲ ಗೌರವ ಸಲಹೆಗಾರರು ಶ್ರೀಮತಿ ಜ್ಯೋತಿ. ಪಿ.ನಾಯಕ್‌, ಉಜಿರೆ ಪ್ರೇರಣಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶೀಲಾ ಮಹಾಬಲ ಉಪಸ್ಥಿತರಿದ್ದರು.

ವ್ಯಂಗ್ಯ ಚಿತ್ರಕಾರ ಸತೀಶ್ ಕಾನತ್ತೂರು, ಶ್ರೀಮತಿ ರೇವತಿ, ಶ್ರೀಮತಿ ಚೇತನಾ, ಶ್ರೀಮತಿ ಅನ್ನಪೂರ್ಣ, ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಇವರನ್ನು ಗೌರವಿಸಲಾಯಿತು.

ಶಿಬಿರಾರ್ಥಿಗಳಾದ ಅನ್ವಿಕಾ ರೋಡ್ರಿಗಸ್, ಶಿವಪ್ರಸಾದ್ ರವರಿಂದ ಶಿಬಿರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಹೆತ್ತವರ ಪರವಾಗಿ ಕ್ಷಮಾ ಭಾರಧ್ವಜ್ ಹಾಗೂ ವ್ಯಂಗ್ಯ ಚಿತ್ರಕಾರರಾದ ಸತೀಶ್ ಕಾನತ್ತೂರು, ಶಿಬಿರದ ಬಗ್ಗೆ ಶೀಲಾ ಮಹಾಬಲ ಹಾಗೂ ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಅನಿಸಿಕೆ ವ್ಯಕ್ತಪಡಿಸಿದರು.

ಶಿಬಿರಾರ್ಥಿಗಳಿಂದ ತಾವು ಕಲಿತಾ ಯೋಗ ಪ್ರದರ್ಶನ ಹಾಗೂ ನೃತ್ಯ ಪ್ರದರ್ಶನವು ನಡೆಯಿತು.

ನೈಮಿಕಾ, ಅನನ್ಯ ಪ್ರಾರ್ಥಿಸಿ, ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಸ್ವಾಗತಿಸಿ, ಗಾಯತ್ರಿ ಶ್ರೀಧರ್ ನಿರೂಪಿಸಿದರು., ಅನ್ನಪೂರ್ಣ ಧನ್ಯವಾದವಿತ್ತರು.

Related posts

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya
error: Content is protected !!