September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಉಜಿರೆ ಅನುಗ್ರಹ ಪ್ರೈಮರಿ ಶಾಲೆಯ ಸಭಾಂಗಣದಲ್ಲಿ ಎ.18 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಉಜಿರೆ ಸೈಂಟ್‌ ಆಂಟೋನಿ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡೀಸ್, ಉಜಿರೆ ಪ್ರಗತಿ ಮಹಿಳಾ ಮಂಡಲ ಗೌರವ ಸಲಹೆಗಾರರು ಶ್ರೀಮತಿ ಜ್ಯೋತಿ. ಪಿ.ನಾಯಕ್‌, ಉಜಿರೆ ಪ್ರೇರಣಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶೀಲಾ ಮಹಾಬಲ ಉಪಸ್ಥಿತರಿದ್ದರು.

ವ್ಯಂಗ್ಯ ಚಿತ್ರಕಾರ ಸತೀಶ್ ಕಾನತ್ತೂರು, ಶ್ರೀಮತಿ ರೇವತಿ, ಶ್ರೀಮತಿ ಚೇತನಾ, ಶ್ರೀಮತಿ ಅನ್ನಪೂರ್ಣ, ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಇವರನ್ನು ಗೌರವಿಸಲಾಯಿತು.

ಶಿಬಿರಾರ್ಥಿಗಳಾದ ಅನ್ವಿಕಾ ರೋಡ್ರಿಗಸ್, ಶಿವಪ್ರಸಾದ್ ರವರಿಂದ ಶಿಬಿರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಹೆತ್ತವರ ಪರವಾಗಿ ಕ್ಷಮಾ ಭಾರಧ್ವಜ್ ಹಾಗೂ ವ್ಯಂಗ್ಯ ಚಿತ್ರಕಾರರಾದ ಸತೀಶ್ ಕಾನತ್ತೂರು, ಶಿಬಿರದ ಬಗ್ಗೆ ಶೀಲಾ ಮಹಾಬಲ ಹಾಗೂ ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಅನಿಸಿಕೆ ವ್ಯಕ್ತಪಡಿಸಿದರು.

ಶಿಬಿರಾರ್ಥಿಗಳಿಂದ ತಾವು ಕಲಿತಾ ಯೋಗ ಪ್ರದರ್ಶನ ಹಾಗೂ ನೃತ್ಯ ಪ್ರದರ್ಶನವು ನಡೆಯಿತು.

ನೈಮಿಕಾ, ಅನನ್ಯ ಪ್ರಾರ್ಥಿಸಿ, ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಸ್ವಾಗತಿಸಿ, ಗಾಯತ್ರಿ ಶ್ರೀಧರ್ ನಿರೂಪಿಸಿದರು., ಅನ್ನಪೂರ್ಣ ಧನ್ಯವಾದವಿತ್ತರು.

Related posts

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!