July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

ಬೆಳ್ತಂಗಡಿ; ಇವತ್ತು ಇನ್ವರ್ಟರ್ ರಿಪೇರಿ ಇದೆ. ಸೈಕಲ್ ನಾಳೆ ಸರಿ ಮಾಡಿಸೋಣ ಎಂದಿದ್ದಕ್ಕೆ 8 ನೇ ತರಗತಿಯ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯದಲ್ಲಿ ನಡೆದಿದೆ.

ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13ವ) ಎಂಬಾತನೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ
ಮನೆಯ ಕಿಟಕಿಗೆ ಹಗ್ಗ ಬಳಸಿ ಕುತ್ತಿಗೆಗೆ ನೇಣು ಬಿಗಿದು ಈ ಕೃತ್ಯ ವೆಸಗಿಕೊಂಡಿದ್ದಾನೆ.

ಬಾಲಕನ ತಂದೆ ಈ‌ ಹಿಂದೆಯೇ ಮೃತ;
ಬಾಲಕನ ತಂದೆ ಪಂಜ ಗ್ರಾಮದ ರೋಹಿತ್ ಗೌಡ ಎಂಬವರು ಈಗಾಗಲೇ ಮೃತಪಟ್ಟಿದ್ದಾರೆ. ತಂದೆಯ ಮರಣದ ನಂತರ ಈತ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ. ಶುಕ್ರವಾರದಂದು ತನ್ನ ನಾಲ್ವರು ಗೆಳೆಯರೊಂದಿಗೆ ಆಟವಾಡುತ್ತಿದ್ದ ಈತ ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮಾವನ ಮನೆಯಲ್ಲಿ ಒತ್ತಾಯಿಸಿದ್ದ. ಅದಕ್ಕೆ ಸ್ಪಂದಿಸಿದ್ದ ಮನೆಯವರು, ಹಾಳಾಗಿದ್ದ ಮನೆಯ ಇನ್ವರ್ಟರ್ ಸರಿಪಡಿಸಿರುವುದರಿಂದ ನಾಳೆ ಸೈಕಲ್ ರಿಪೇರಿ ಮಾಡಿಸೋಣ ಎಂದಿದ್ದರು. ಇದೇ ಕಾರಣಕ್ಕೆ ಮನನೊಂದ ಬಾಲಕ ಈ ಕಠಿಣ ನಿರ್ಧಾರ ಕೈಗೊಂಡಿದ್ದಾನೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಮನೆಯವರು ವಿವರ ನೀಡಿದ್ದಾರೆ‌. ಇದೀಗ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Related posts

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
error: Content is protected !!