July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

ಬೆಳ್ತಂಗಡಿ; ಇವತ್ತು ಇನ್ವರ್ಟರ್ ರಿಪೇರಿ ಇದೆ. ಸೈಕಲ್ ನಾಳೆ ಸರಿ ಮಾಡಿಸೋಣ ಎಂದಿದ್ದಕ್ಕೆ 8 ನೇ ತರಗತಿಯ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯದಲ್ಲಿ ನಡೆದಿದೆ.

ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13ವ) ಎಂಬಾತನೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ
ಮನೆಯ ಕಿಟಕಿಗೆ ಹಗ್ಗ ಬಳಸಿ ಕುತ್ತಿಗೆಗೆ ನೇಣು ಬಿಗಿದು ಈ ಕೃತ್ಯ ವೆಸಗಿಕೊಂಡಿದ್ದಾನೆ.

ಬಾಲಕನ ತಂದೆ ಈ‌ ಹಿಂದೆಯೇ ಮೃತ;
ಬಾಲಕನ ತಂದೆ ಪಂಜ ಗ್ರಾಮದ ರೋಹಿತ್ ಗೌಡ ಎಂಬವರು ಈಗಾಗಲೇ ಮೃತಪಟ್ಟಿದ್ದಾರೆ. ತಂದೆಯ ಮರಣದ ನಂತರ ಈತ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ. ಶುಕ್ರವಾರದಂದು ತನ್ನ ನಾಲ್ವರು ಗೆಳೆಯರೊಂದಿಗೆ ಆಟವಾಡುತ್ತಿದ್ದ ಈತ ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮಾವನ ಮನೆಯಲ್ಲಿ ಒತ್ತಾಯಿಸಿದ್ದ. ಅದಕ್ಕೆ ಸ್ಪಂದಿಸಿದ್ದ ಮನೆಯವರು, ಹಾಳಾಗಿದ್ದ ಮನೆಯ ಇನ್ವರ್ಟರ್ ಸರಿಪಡಿಸಿರುವುದರಿಂದ ನಾಳೆ ಸೈಕಲ್ ರಿಪೇರಿ ಮಾಡಿಸೋಣ ಎಂದಿದ್ದರು. ಇದೇ ಕಾರಣಕ್ಕೆ ಮನನೊಂದ ಬಾಲಕ ಈ ಕಠಿಣ ನಿರ್ಧಾರ ಕೈಗೊಂಡಿದ್ದಾನೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಮನೆಯವರು ವಿವರ ನೀಡಿದ್ದಾರೆ‌. ಇದೀಗ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Related posts

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

Suddi Udaya
error: Content is protected !!