23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

ಬೆಳ್ತಂಗಡಿ; ಇವತ್ತು ಇನ್ವರ್ಟರ್ ರಿಪೇರಿ ಇದೆ. ಸೈಕಲ್ ನಾಳೆ ಸರಿ ಮಾಡಿಸೋಣ ಎಂದಿದ್ದಕ್ಕೆ 8 ನೇ ತರಗತಿಯ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯದಲ್ಲಿ ನಡೆದಿದೆ.

ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13ವ) ಎಂಬಾತನೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ
ಮನೆಯ ಕಿಟಕಿಗೆ ಹಗ್ಗ ಬಳಸಿ ಕುತ್ತಿಗೆಗೆ ನೇಣು ಬಿಗಿದು ಈ ಕೃತ್ಯ ವೆಸಗಿಕೊಂಡಿದ್ದಾನೆ.

ಬಾಲಕನ ತಂದೆ ಈ‌ ಹಿಂದೆಯೇ ಮೃತ;
ಬಾಲಕನ ತಂದೆ ಪಂಜ ಗ್ರಾಮದ ರೋಹಿತ್ ಗೌಡ ಎಂಬವರು ಈಗಾಗಲೇ ಮೃತಪಟ್ಟಿದ್ದಾರೆ. ತಂದೆಯ ಮರಣದ ನಂತರ ಈತ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ. ಶುಕ್ರವಾರದಂದು ತನ್ನ ನಾಲ್ವರು ಗೆಳೆಯರೊಂದಿಗೆ ಆಟವಾಡುತ್ತಿದ್ದ ಈತ ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮಾವನ ಮನೆಯಲ್ಲಿ ಒತ್ತಾಯಿಸಿದ್ದ. ಅದಕ್ಕೆ ಸ್ಪಂದಿಸಿದ್ದ ಮನೆಯವರು, ಹಾಳಾಗಿದ್ದ ಮನೆಯ ಇನ್ವರ್ಟರ್ ಸರಿಪಡಿಸಿರುವುದರಿಂದ ನಾಳೆ ಸೈಕಲ್ ರಿಪೇರಿ ಮಾಡಿಸೋಣ ಎಂದಿದ್ದರು. ಇದೇ ಕಾರಣಕ್ಕೆ ಮನನೊಂದ ಬಾಲಕ ಈ ಕಠಿಣ ನಿರ್ಧಾರ ಕೈಗೊಂಡಿದ್ದಾನೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಮನೆಯವರು ವಿವರ ನೀಡಿದ್ದಾರೆ‌. ಇದೀಗ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Related posts

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!