29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಕೊರಂಜ ಸರಕಾರಿ ಶಾಲಾ ಮುಂಭಾಗದಲ್ಲಿ ಚರಂಡಿ ಮುಚ್ಚಿದ ಪರಿಣಾಮವಾಗಿ ಮನೆಯೊಳಗೆ ನೀರು ತುಂಬಿದ ಘಟನೆ ಎ.20 ರಂದು ನಡೆಯಿತು.


ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಜ ಸ.ಹಿ.ಪ್ರಾ.ಶಾಲೆ ಮುಂಭಾಗದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆಯ ಚರಂಡಿ ಮುಚ್ಚಿದ ಪರಿಣಾಮವಾಗಿ ರಸ್ತೆ ಬದಿ ಚರಂಡಿ ನೀರು ಹಾಗೂ ಪ್ಲಾಸ್ಟಿಕ್, ಕಸ,ಕಡ್ಡಿ ಮನೆಯೊಳಗೆ ನುಗ್ಗಿ ಮನೆಯವರಿಗೆ ತೊಂದರೆ ಆಗಿದೆ.


ವಿಷಯ ತಿಳಿದು ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಸ್ಥಳಕ್ಕೆ ಭೇಟಿ ತಕ್ಷಣ ಸಮಸ್ಯೆಯನ್ನು ಸರಿಪಡಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.


ಕಳೆದ ಸುಮಾರು 5 – 6 ವರ್ಷಗಳಿಂದ ಈ ರೀತಿಯ ತೊಂದರೆಗಳನ್ನು ಸ್ಥಳೀಯರು ಅನುಭವಿಸುತ್ತಿದ್ದಾರೆ. ಗುರುವಾಯನಕರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆಯ ಪಕ್ಕದಲ್ಲಿ ಚರಂಡಿ ನಿರ್ಮಾಣದ ಅವ್ಯವಸ್ಥೆಯಿಂದ ಮತ್ತು ಸಂಬಂಧಿಸಿದ ಇಲಾಖೆಯ ನಿರ್ಲಕ್ಷ್ಯ ಕಾರಣವೆಂದು ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮಳೆಗಾಲದಲ್ಲಿ ಶಾಲಾ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಸಾರ್ವಜನಿಕ ನಡೆದಾಡಲು ತುಂಬಾ ತೊಂದರೆ ಆಗುತ್ತದೆ. ರಸ್ತೆಬದಿಯ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆಯನ್ನು ಮಾಡದೇ ಇದ್ದಲ್ಲಿ ರಸ್ತೆ ತಡೆ ಮಾಡುವ ನಿರ್ಧಾರಕ್ಕೆ ಮುಂದಾಗಿದ್ದಾರೆ.

Related posts

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!