25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಕೊರಂಜ ಸರಕಾರಿ ಶಾಲಾ ಮುಂಭಾಗದಲ್ಲಿ ಚರಂಡಿ ಮುಚ್ಚಿದ ಪರಿಣಾಮವಾಗಿ ಮನೆಯೊಳಗೆ ನೀರು ತುಂಬಿದ ಘಟನೆ ಎ.20 ರಂದು ನಡೆಯಿತು.


ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಜ ಸ.ಹಿ.ಪ್ರಾ.ಶಾಲೆ ಮುಂಭಾಗದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆಯ ಚರಂಡಿ ಮುಚ್ಚಿದ ಪರಿಣಾಮವಾಗಿ ರಸ್ತೆ ಬದಿ ಚರಂಡಿ ನೀರು ಹಾಗೂ ಪ್ಲಾಸ್ಟಿಕ್, ಕಸ,ಕಡ್ಡಿ ಮನೆಯೊಳಗೆ ನುಗ್ಗಿ ಮನೆಯವರಿಗೆ ತೊಂದರೆ ಆಗಿದೆ.


ವಿಷಯ ತಿಳಿದು ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಸ್ಥಳಕ್ಕೆ ಭೇಟಿ ತಕ್ಷಣ ಸಮಸ್ಯೆಯನ್ನು ಸರಿಪಡಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.


ಕಳೆದ ಸುಮಾರು 5 – 6 ವರ್ಷಗಳಿಂದ ಈ ರೀತಿಯ ತೊಂದರೆಗಳನ್ನು ಸ್ಥಳೀಯರು ಅನುಭವಿಸುತ್ತಿದ್ದಾರೆ. ಗುರುವಾಯನಕರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆಯ ಪಕ್ಕದಲ್ಲಿ ಚರಂಡಿ ನಿರ್ಮಾಣದ ಅವ್ಯವಸ್ಥೆಯಿಂದ ಮತ್ತು ಸಂಬಂಧಿಸಿದ ಇಲಾಖೆಯ ನಿರ್ಲಕ್ಷ್ಯ ಕಾರಣವೆಂದು ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮಳೆಗಾಲದಲ್ಲಿ ಶಾಲಾ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಸಾರ್ವಜನಿಕ ನಡೆದಾಡಲು ತುಂಬಾ ತೊಂದರೆ ಆಗುತ್ತದೆ. ರಸ್ತೆಬದಿಯ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆಯನ್ನು ಮಾಡದೇ ಇದ್ದಲ್ಲಿ ರಸ್ತೆ ತಡೆ ಮಾಡುವ ನಿರ್ಧಾರಕ್ಕೆ ಮುಂದಾಗಿದ್ದಾರೆ.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕುಂಭಾಭಿಷೇಕ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ

Suddi Udaya

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!