ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಕೊರಂಜ ಸರಕಾರಿ ಶಾಲಾ ಮುಂಭಾಗದಲ್ಲಿ ಚರಂಡಿ ಮುಚ್ಚಿದ ಪರಿಣಾಮವಾಗಿ ಮನೆಯೊಳಗೆ ನೀರು ತುಂಬಿದ ಘಟನೆ ಎ.20 ರಂದು ನಡೆಯಿತು.


ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಜ ಸ.ಹಿ.ಪ್ರಾ.ಶಾಲೆ ಮುಂಭಾಗದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆಯ ಚರಂಡಿ ಮುಚ್ಚಿದ ಪರಿಣಾಮವಾಗಿ ರಸ್ತೆ ಬದಿ ಚರಂಡಿ ನೀರು ಹಾಗೂ ಪ್ಲಾಸ್ಟಿಕ್, ಕಸ,ಕಡ್ಡಿ ಮನೆಯೊಳಗೆ ನುಗ್ಗಿ ಮನೆಯವರಿಗೆ ತೊಂದರೆ ಆಗಿದೆ.


ವಿಷಯ ತಿಳಿದು ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಸ್ಥಳಕ್ಕೆ ಭೇಟಿ ತಕ್ಷಣ ಸಮಸ್ಯೆಯನ್ನು ಸರಿಪಡಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.


ಕಳೆದ ಸುಮಾರು 5 – 6 ವರ್ಷಗಳಿಂದ ಈ ರೀತಿಯ ತೊಂದರೆಗಳನ್ನು ಸ್ಥಳೀಯರು ಅನುಭವಿಸುತ್ತಿದ್ದಾರೆ. ಗುರುವಾಯನಕರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆಯ ಪಕ್ಕದಲ್ಲಿ ಚರಂಡಿ ನಿರ್ಮಾಣದ ಅವ್ಯವಸ್ಥೆಯಿಂದ ಮತ್ತು ಸಂಬಂಧಿಸಿದ ಇಲಾಖೆಯ ನಿರ್ಲಕ್ಷ್ಯ ಕಾರಣವೆಂದು ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮಳೆಗಾಲದಲ್ಲಿ ಶಾಲಾ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಸಾರ್ವಜನಿಕ ನಡೆದಾಡಲು ತುಂಬಾ ತೊಂದರೆ ಆಗುತ್ತದೆ. ರಸ್ತೆಬದಿಯ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆಯನ್ನು ಮಾಡದೇ ಇದ್ದಲ್ಲಿ ರಸ್ತೆ ತಡೆ ಮಾಡುವ ನಿರ್ಧಾರಕ್ಕೆ ಮುಂದಾಗಿದ್ದಾರೆ.

Related posts

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

Suddi Udaya

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ಎಸ್.ಡಿ.ಎಂ ಕಾಲೇಜು : ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪೂರ್ವಾಭ್ಯಾಸ ಶಿಬಿರ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya
error: Content is protected !!