July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಕೊರಂಜ ಸರಕಾರಿ ಶಾಲಾ ಮುಂಭಾಗದಲ್ಲಿ ಚರಂಡಿ ಮುಚ್ಚಿದ ಪರಿಣಾಮವಾಗಿ ಮನೆಯೊಳಗೆ ನೀರು ತುಂಬಿದ ಘಟನೆ ಎ.20 ರಂದು ನಡೆಯಿತು.


ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಜ ಸ.ಹಿ.ಪ್ರಾ.ಶಾಲೆ ಮುಂಭಾಗದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆಯ ಚರಂಡಿ ಮುಚ್ಚಿದ ಪರಿಣಾಮವಾಗಿ ರಸ್ತೆ ಬದಿ ಚರಂಡಿ ನೀರು ಹಾಗೂ ಪ್ಲಾಸ್ಟಿಕ್, ಕಸ,ಕಡ್ಡಿ ಮನೆಯೊಳಗೆ ನುಗ್ಗಿ ಮನೆಯವರಿಗೆ ತೊಂದರೆ ಆಗಿದೆ.


ವಿಷಯ ತಿಳಿದು ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಸ್ಥಳಕ್ಕೆ ಭೇಟಿ ತಕ್ಷಣ ಸಮಸ್ಯೆಯನ್ನು ಸರಿಪಡಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.


ಕಳೆದ ಸುಮಾರು 5 – 6 ವರ್ಷಗಳಿಂದ ಈ ರೀತಿಯ ತೊಂದರೆಗಳನ್ನು ಸ್ಥಳೀಯರು ಅನುಭವಿಸುತ್ತಿದ್ದಾರೆ. ಗುರುವಾಯನಕರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆಯ ಪಕ್ಕದಲ್ಲಿ ಚರಂಡಿ ನಿರ್ಮಾಣದ ಅವ್ಯವಸ್ಥೆಯಿಂದ ಮತ್ತು ಸಂಬಂಧಿಸಿದ ಇಲಾಖೆಯ ನಿರ್ಲಕ್ಷ್ಯ ಕಾರಣವೆಂದು ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮಳೆಗಾಲದಲ್ಲಿ ಶಾಲಾ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಸಾರ್ವಜನಿಕ ನಡೆದಾಡಲು ತುಂಬಾ ತೊಂದರೆ ಆಗುತ್ತದೆ. ರಸ್ತೆಬದಿಯ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆಯನ್ನು ಮಾಡದೇ ಇದ್ದಲ್ಲಿ ರಸ್ತೆ ತಡೆ ಮಾಡುವ ನಿರ್ಧಾರಕ್ಕೆ ಮುಂದಾಗಿದ್ದಾರೆ.

Related posts

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಡಾ. ಎಸ್.ಎಲ್.ಬೈರಪ್ಪರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ವೇಣೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!