23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವೆಡೆ ಉತ್ತಮ ಮಳೆ

ಬೆಳ್ತಂಗಡಿ: ಶುಕ್ರವಾರ ಸಂಜೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ನೆರಿಯ ಮುಂಡಾಜೆ, ತೋಟತ್ತಾಡಿ, ಚಿಬಿದ್ರೆ, ಕಡಿರುದ್ಯಾವರ ಮೊದಲಾದ ಗ್ರಾಮಗಳಲ್ಲಿ ಉತ್ತಮ ಮಳೆ ಸುರಿದಿದೆ.
ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ನೆರಿಯ ಕಡೆ ಗಾಳಿ, ಗುಡುಗಿನ ಸಹಿತ ಮಳೆ ಬಿದ್ದಿದೆ.


ರಾಷ್ಟ್ರೀಯ ಹೆದ್ದಾರಿ ಬ್ಲಾಕ್ :
ಮುಂಡಾಜೆ ಗ್ರಾಮದ ನಿಡಿಗಲ್ -ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಅಂಗವಾಗಿ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಕೆಸರುಮಯ ವಾತಾವರಣ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಅಂಬಡ್ತ್ಯಾರು ಎಂಬಲ್ಲಿ ಮಣ್ಣಿನ ರಸ್ತೆಯಲ್ಲಿ ಜಾರಿದ ಟ್ಯಾಂಕರ್ ನಿಂದಾಗಿ ಹಲವು ಸಮಯ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು. ಬೇಕಾಬಿಟ್ಟಿ ದ್ವಿಚಕ್ರವಾಹನಗಳನ್ನು ನುಗ್ಗಿಸಿದ ಪರಿಣಾಮ ಟ್ರಾಫಿಕ್ ಜಾಮ್ ಇನ್ನಷ್ಟು ಹೆಚ್ಚಲು
ಕಾರಣವಾಯಿತು.ಬಹಲವು ದ್ವಿಚಕ್ರ ವಾಹನ ಸವಾರರು ಉರುಳಿ ಬಿದ್ದ ಘಟನೆಯು ನಡೆಯಿತು.

Related posts

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!