ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ ” ಮತದಾನ ನಮ್ಮ ಹಕ್ಕು” ನಮ್ಮ ನಡೆ ಮತಗಟ್ಟೆಯ ಕಡೆ ಎಂಬ ಬೀದಿ ನಾಟಕ ಪ್ರದರ್ಶನವು ಎ.20 ರಂದು ಬೆಳ್ತಂಗಡಿ ತಾಲೂಕಿನ ವಿವಿಧ ಕಾಲೇಜು ಮತ್ತು ಸಾರ್ವಜನಿಕ ಪರಿಸರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಾಲೇಜಿನ ರಾ.ಸೇ.ಯೋ ಘಟಕ ಯೋಜನಾಧಿಕಾರಿಯಾದ ಡಾ.ಮಹೇಶ್ ಕುಮಾ‌ರ್ ಶೆಟ್ಟಿ ಎಚ್, ಶ್ರೀಮತಿ ದೀಪಾ ಆ‌ರ್.ಪಿ , ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್.ಎಸ್.ಎಸ್ ಸ್ವಯಂ ಸೇವಕರು, ಇತರ ವಿದ್ಯಾರ್ಥಿಗಳು ನಾಟಕದಲ್ಲಿ ಭಾಗವಹಿಸಿದರು.

Leave a Comment

error: Content is protected !!