25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

ಹತ್ಯಡ್ಕ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ, ವನದುರ್ಗಾ‌ಹೋಮ, ಹಾಗೂ ಅಭಿನಂದನಾ ಸಭೆ, ಭಜನೋತ್ಸವ, ಕಾರ್ಯಕ್ರಮವು ಎ.18 ರಂದು ಜರುಗಿತು.

ನಂತರ ಅಭಿನಂದನಾ ಸಭಾ ಉತ್ತಮ ಪ್ರಾಮಾಣಿಕ ಭಕ್ತಿಯಿಂದ ಸಮಾಜದಲ್ಲಿ ಪುಣ್ಯ ಕಾರ್ಯಗಳು ನೆರೆವೇರುತ್ತದೆ. ಅದಕ್ಕೆ ಮಾದರಿ ನಮ್ಮ ಅರಿಕೆಗುಡ್ದೆ ಪುಣ್ಯಕ್ಷೇತ್ರ. ಸಾವಿರಾರು ಮಂದಿ ಕಾರ್ಯಕರ್ತರ ಅವಿರತ ಶ್ರಮಕ್ಕೆ ಅಭಿನಂದನೆ. ಈ ದೇವಾಲಯದಲ್ಲಿ ಮುಂದೆಯೂ ಸಮಾಜ ಮುಖಿ ಕಾರ್ಯವನ್ನು ಮುಂದುವರಿಸುತ್ತೇವೆ. ಅಲ್ಲದೆ ಅನ್ನದಾನ ಕಾರ್ಯ ಪ್ರಾರಂಭಿಸುತ್ತೇವೆ. ಸಂಪ್ರದಾಯದಂತೆ ಎಲ್ಲಾ ಪುಣ್ಯ ಕಾರ್ಯವನ್ನು ಇಲ್ಲಿ ನಡೆಸುತ್ತೇವೆ ಎಂದು ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಪುಣ್ಯಕ್ಷೇತ್ರದ ದೇವಾಲಯದ ಅಧ್ಯಕ್ಷ ಪಿಲಿಕಬೆ ಪ್ರಕಾಶ್ ಅವರು ಕಾರ್ಯಕರ್ತರಿಗೆ ಅಭಿನಂದನಾ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬ್ರಹ್ಮ‌ಕಲಶ ಅಧ್ಯಕ್ಷ ಶ್ರೀರಂಗ ದಾಮಲೆ, ಶ್ರೀಕರ ರಾವ್, ಸಂಚಾಲಕರಾದ ಜಯರಾಮ ನೆಲ್ಲಿತ್ತಾಯ, ಚಂದ್ರ ಶೇಖರ ಸಾಲ್ಯಾನ್, ದೇವಾಲಯದ ಅರ್ಚಕರು ಮುಂತಾದವರು ಭಾಗವಹಿಸಿ, ಅಭಿನಂದನಾ ಭಾಷಣ ಮಾಡಿದರು.


ನಂತರ ಶ್ರೀ ಕಡಬ ಸುಂದರ ಅವರ ತಂಡದವರಿಂದ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆಯಿತು. ತಾಲೂಕಿನ ವಿವಿಧ ತಂಡಗಳು ಭಾಗವಹಿಸಿದ್ದವು.
ಮುರಳೀಧರ ಸ್ವಾಗತಿಸಿ, ಶ್ರೀಮತಿ ರೇಣುಕಾ ಸುಧೀರ್ ಕಾರ್ಯಕ್ರಮ ನಿರ್ವಹಿಸಿದ್ದರು.

Related posts

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

Suddi Udaya

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya
error: Content is protected !!