23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

ಹತ್ಯಡ್ಕ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ, ವನದುರ್ಗಾ‌ಹೋಮ, ಹಾಗೂ ಅಭಿನಂದನಾ ಸಭೆ, ಭಜನೋತ್ಸವ, ಕಾರ್ಯಕ್ರಮವು ಎ.18 ರಂದು ಜರುಗಿತು.

ನಂತರ ಅಭಿನಂದನಾ ಸಭಾ ಉತ್ತಮ ಪ್ರಾಮಾಣಿಕ ಭಕ್ತಿಯಿಂದ ಸಮಾಜದಲ್ಲಿ ಪುಣ್ಯ ಕಾರ್ಯಗಳು ನೆರೆವೇರುತ್ತದೆ. ಅದಕ್ಕೆ ಮಾದರಿ ನಮ್ಮ ಅರಿಕೆಗುಡ್ದೆ ಪುಣ್ಯಕ್ಷೇತ್ರ. ಸಾವಿರಾರು ಮಂದಿ ಕಾರ್ಯಕರ್ತರ ಅವಿರತ ಶ್ರಮಕ್ಕೆ ಅಭಿನಂದನೆ. ಈ ದೇವಾಲಯದಲ್ಲಿ ಮುಂದೆಯೂ ಸಮಾಜ ಮುಖಿ ಕಾರ್ಯವನ್ನು ಮುಂದುವರಿಸುತ್ತೇವೆ. ಅಲ್ಲದೆ ಅನ್ನದಾನ ಕಾರ್ಯ ಪ್ರಾರಂಭಿಸುತ್ತೇವೆ. ಸಂಪ್ರದಾಯದಂತೆ ಎಲ್ಲಾ ಪುಣ್ಯ ಕಾರ್ಯವನ್ನು ಇಲ್ಲಿ ನಡೆಸುತ್ತೇವೆ ಎಂದು ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಪುಣ್ಯಕ್ಷೇತ್ರದ ದೇವಾಲಯದ ಅಧ್ಯಕ್ಷ ಪಿಲಿಕಬೆ ಪ್ರಕಾಶ್ ಅವರು ಕಾರ್ಯಕರ್ತರಿಗೆ ಅಭಿನಂದನಾ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬ್ರಹ್ಮ‌ಕಲಶ ಅಧ್ಯಕ್ಷ ಶ್ರೀರಂಗ ದಾಮಲೆ, ಶ್ರೀಕರ ರಾವ್, ಸಂಚಾಲಕರಾದ ಜಯರಾಮ ನೆಲ್ಲಿತ್ತಾಯ, ಚಂದ್ರ ಶೇಖರ ಸಾಲ್ಯಾನ್, ದೇವಾಲಯದ ಅರ್ಚಕರು ಮುಂತಾದವರು ಭಾಗವಹಿಸಿ, ಅಭಿನಂದನಾ ಭಾಷಣ ಮಾಡಿದರು.


ನಂತರ ಶ್ರೀ ಕಡಬ ಸುಂದರ ಅವರ ತಂಡದವರಿಂದ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆಯಿತು. ತಾಲೂಕಿನ ವಿವಿಧ ತಂಡಗಳು ಭಾಗವಹಿಸಿದ್ದವು.
ಮುರಳೀಧರ ಸ್ವಾಗತಿಸಿ, ಶ್ರೀಮತಿ ರೇಣುಕಾ ಸುಧೀರ್ ಕಾರ್ಯಕ್ರಮ ನಿರ್ವಹಿಸಿದ್ದರು.

Related posts

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya

ಕೊಂಕನ್ ಬೆಲ್ಸ್ ಕ್ರೀಡಾ ಕೂಟ – ಚಾಂಪಿಯನ್‌ಶಿಪ್ ಚಾಲೆಂಜ್

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!