22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಉಜಿರೆ ಅನುಗ್ರಹ ಪ್ರೈಮರಿ ಶಾಲೆಯ ಸಭಾಂಗಣದಲ್ಲಿ ಎ.18 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಉಜಿರೆ ಸೈಂಟ್‌ ಆಂಟೋನಿ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡೀಸ್, ಉಜಿರೆ ಪ್ರಗತಿ ಮಹಿಳಾ ಮಂಡಲ ಗೌರವ ಸಲಹೆಗಾರರು ಶ್ರೀಮತಿ ಜ್ಯೋತಿ. ಪಿ.ನಾಯಕ್‌, ಉಜಿರೆ ಪ್ರೇರಣಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶೀಲಾ ಮಹಾಬಲ ಉಪಸ್ಥಿತರಿದ್ದರು.

ವ್ಯಂಗ್ಯ ಚಿತ್ರಕಾರ ಸತೀಶ್ ಕಾನತ್ತೂರು, ಶ್ರೀಮತಿ ರೇವತಿ, ಶ್ರೀಮತಿ ಚೇತನಾ, ಶ್ರೀಮತಿ ಅನ್ನಪೂರ್ಣ, ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಇವರನ್ನು ಗೌರವಿಸಲಾಯಿತು.

ಶಿಬಿರಾರ್ಥಿಗಳಾದ ಅನ್ವಿಕಾ ರೋಡ್ರಿಗಸ್, ಶಿವಪ್ರಸಾದ್ ರವರಿಂದ ಶಿಬಿರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಹೆತ್ತವರ ಪರವಾಗಿ ಕ್ಷಮಾ ಭಾರಧ್ವಜ್ ಹಾಗೂ ವ್ಯಂಗ್ಯ ಚಿತ್ರಕಾರರಾದ ಸತೀಶ್ ಕಾನತ್ತೂರು, ಶಿಬಿರದ ಬಗ್ಗೆ ಶೀಲಾ ಮಹಾಬಲ ಹಾಗೂ ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಅನಿಸಿಕೆ ವ್ಯಕ್ತಪಡಿಸಿದರು.

ಶಿಬಿರಾರ್ಥಿಗಳಿಂದ ತಾವು ಕಲಿತಾ ಯೋಗ ಪ್ರದರ್ಶನ ಹಾಗೂ ನೃತ್ಯ ಪ್ರದರ್ಶನವು ನಡೆಯಿತು.

ನೈಮಿಕಾ, ಅನನ್ಯ ಪ್ರಾರ್ಥಿಸಿ, ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಸ್ವಾಗತಿಸಿ, ಗಾಯತ್ರಿ ಶ್ರೀಧರ್ ನಿರೂಪಿಸಿದರು., ಅನ್ನಪೂರ್ಣ ಧನ್ಯವಾದವಿತ್ತರು.

Related posts

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

Suddi Udaya
error: Content is protected !!