ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

ಬೆಳ್ತಂಗಡಿ; ಇವತ್ತು ಇನ್ವರ್ಟರ್ ರಿಪೇರಿ ಇದೆ. ಸೈಕಲ್ ನಾಳೆ ಸರಿ ಮಾಡಿಸೋಣ ಎಂದಿದ್ದಕ್ಕೆ 8 ನೇ ತರಗತಿಯ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯದಲ್ಲಿ ನಡೆದಿದೆ.

ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13ವ) ಎಂಬಾತನೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ
ಮನೆಯ ಕಿಟಕಿಗೆ ಹಗ್ಗ ಬಳಸಿ ಕುತ್ತಿಗೆಗೆ ನೇಣು ಬಿಗಿದು ಈ ಕೃತ್ಯ ವೆಸಗಿಕೊಂಡಿದ್ದಾನೆ.

ಬಾಲಕನ ತಂದೆ ಈ‌ ಹಿಂದೆಯೇ ಮೃತ;
ಬಾಲಕನ ತಂದೆ ಪಂಜ ಗ್ರಾಮದ ರೋಹಿತ್ ಗೌಡ ಎಂಬವರು ಈಗಾಗಲೇ ಮೃತಪಟ್ಟಿದ್ದಾರೆ. ತಂದೆಯ ಮರಣದ ನಂತರ ಈತ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ. ಶುಕ್ರವಾರದಂದು ತನ್ನ ನಾಲ್ವರು ಗೆಳೆಯರೊಂದಿಗೆ ಆಟವಾಡುತ್ತಿದ್ದ ಈತ ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮಾವನ ಮನೆಯಲ್ಲಿ ಒತ್ತಾಯಿಸಿದ್ದ. ಅದಕ್ಕೆ ಸ್ಪಂದಿಸಿದ್ದ ಮನೆಯವರು, ಹಾಳಾಗಿದ್ದ ಮನೆಯ ಇನ್ವರ್ಟರ್ ಸರಿಪಡಿಸಿರುವುದರಿಂದ ನಾಳೆ ಸೈಕಲ್ ರಿಪೇರಿ ಮಾಡಿಸೋಣ ಎಂದಿದ್ದರು. ಇದೇ ಕಾರಣಕ್ಕೆ ಮನನೊಂದ ಬಾಲಕ ಈ ಕಠಿಣ ನಿರ್ಧಾರ ಕೈಗೊಂಡಿದ್ದಾನೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಮನೆಯವರು ವಿವರ ನೀಡಿದ್ದಾರೆ‌. ಇದೀಗ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Related posts

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ “ಅಕ್ಷರೋತ್ಸವ ” ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya
error: Content is protected !!