27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಕೊರಂಜ ಸರಕಾರಿ ಶಾಲಾ ಮುಂಭಾಗದಲ್ಲಿ ಚರಂಡಿ ಮುಚ್ಚಿದ ಪರಿಣಾಮವಾಗಿ ಮನೆಯೊಳಗೆ ನೀರು ತುಂಬಿದ ಘಟನೆ ಎ.20 ರಂದು ನಡೆಯಿತು.


ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಜ ಸ.ಹಿ.ಪ್ರಾ.ಶಾಲೆ ಮುಂಭಾಗದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆಯ ಚರಂಡಿ ಮುಚ್ಚಿದ ಪರಿಣಾಮವಾಗಿ ರಸ್ತೆ ಬದಿ ಚರಂಡಿ ನೀರು ಹಾಗೂ ಪ್ಲಾಸ್ಟಿಕ್, ಕಸ,ಕಡ್ಡಿ ಮನೆಯೊಳಗೆ ನುಗ್ಗಿ ಮನೆಯವರಿಗೆ ತೊಂದರೆ ಆಗಿದೆ.


ವಿಷಯ ತಿಳಿದು ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಸ್ಥಳಕ್ಕೆ ಭೇಟಿ ತಕ್ಷಣ ಸಮಸ್ಯೆಯನ್ನು ಸರಿಪಡಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.


ಕಳೆದ ಸುಮಾರು 5 – 6 ವರ್ಷಗಳಿಂದ ಈ ರೀತಿಯ ತೊಂದರೆಗಳನ್ನು ಸ್ಥಳೀಯರು ಅನುಭವಿಸುತ್ತಿದ್ದಾರೆ. ಗುರುವಾಯನಕರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆಯ ಪಕ್ಕದಲ್ಲಿ ಚರಂಡಿ ನಿರ್ಮಾಣದ ಅವ್ಯವಸ್ಥೆಯಿಂದ ಮತ್ತು ಸಂಬಂಧಿಸಿದ ಇಲಾಖೆಯ ನಿರ್ಲಕ್ಷ್ಯ ಕಾರಣವೆಂದು ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮಳೆಗಾಲದಲ್ಲಿ ಶಾಲಾ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಸಾರ್ವಜನಿಕ ನಡೆದಾಡಲು ತುಂಬಾ ತೊಂದರೆ ಆಗುತ್ತದೆ. ರಸ್ತೆಬದಿಯ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆಯನ್ನು ಮಾಡದೇ ಇದ್ದಲ್ಲಿ ರಸ್ತೆ ತಡೆ ಮಾಡುವ ನಿರ್ಧಾರಕ್ಕೆ ಮುಂದಾಗಿದ್ದಾರೆ.

Related posts

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya
error: Content is protected !!