July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವೆಡೆ ಉತ್ತಮ ಮಳೆ

ಬೆಳ್ತಂಗಡಿ: ಶುಕ್ರವಾರ ಸಂಜೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ನೆರಿಯ ಮುಂಡಾಜೆ, ತೋಟತ್ತಾಡಿ, ಚಿಬಿದ್ರೆ, ಕಡಿರುದ್ಯಾವರ ಮೊದಲಾದ ಗ್ರಾಮಗಳಲ್ಲಿ ಉತ್ತಮ ಮಳೆ ಸುರಿದಿದೆ.
ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ನೆರಿಯ ಕಡೆ ಗಾಳಿ, ಗುಡುಗಿನ ಸಹಿತ ಮಳೆ ಬಿದ್ದಿದೆ.


ರಾಷ್ಟ್ರೀಯ ಹೆದ್ದಾರಿ ಬ್ಲಾಕ್ :
ಮುಂಡಾಜೆ ಗ್ರಾಮದ ನಿಡಿಗಲ್ -ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಅಂಗವಾಗಿ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಕೆಸರುಮಯ ವಾತಾವರಣ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಅಂಬಡ್ತ್ಯಾರು ಎಂಬಲ್ಲಿ ಮಣ್ಣಿನ ರಸ್ತೆಯಲ್ಲಿ ಜಾರಿದ ಟ್ಯಾಂಕರ್ ನಿಂದಾಗಿ ಹಲವು ಸಮಯ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು. ಬೇಕಾಬಿಟ್ಟಿ ದ್ವಿಚಕ್ರವಾಹನಗಳನ್ನು ನುಗ್ಗಿಸಿದ ಪರಿಣಾಮ ಟ್ರಾಫಿಕ್ ಜಾಮ್ ಇನ್ನಷ್ಟು ಹೆಚ್ಚಲು
ಕಾರಣವಾಯಿತು.ಬಹಲವು ದ್ವಿಚಕ್ರ ವಾಹನ ಸವಾರರು ಉರುಳಿ ಬಿದ್ದ ಘಟನೆಯು ನಡೆಯಿತು.

Related posts

ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 23ನೇ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya
error: Content is protected !!