25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವೆಡೆ ಉತ್ತಮ ಮಳೆ

ಬೆಳ್ತಂಗಡಿ: ಶುಕ್ರವಾರ ಸಂಜೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ನೆರಿಯ ಮುಂಡಾಜೆ, ತೋಟತ್ತಾಡಿ, ಚಿಬಿದ್ರೆ, ಕಡಿರುದ್ಯಾವರ ಮೊದಲಾದ ಗ್ರಾಮಗಳಲ್ಲಿ ಉತ್ತಮ ಮಳೆ ಸುರಿದಿದೆ.
ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ನೆರಿಯ ಕಡೆ ಗಾಳಿ, ಗುಡುಗಿನ ಸಹಿತ ಮಳೆ ಬಿದ್ದಿದೆ.


ರಾಷ್ಟ್ರೀಯ ಹೆದ್ದಾರಿ ಬ್ಲಾಕ್ :
ಮುಂಡಾಜೆ ಗ್ರಾಮದ ನಿಡಿಗಲ್ -ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಅಂಗವಾಗಿ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಕೆಸರುಮಯ ವಾತಾವರಣ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಅಂಬಡ್ತ್ಯಾರು ಎಂಬಲ್ಲಿ ಮಣ್ಣಿನ ರಸ್ತೆಯಲ್ಲಿ ಜಾರಿದ ಟ್ಯಾಂಕರ್ ನಿಂದಾಗಿ ಹಲವು ಸಮಯ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು. ಬೇಕಾಬಿಟ್ಟಿ ದ್ವಿಚಕ್ರವಾಹನಗಳನ್ನು ನುಗ್ಗಿಸಿದ ಪರಿಣಾಮ ಟ್ರಾಫಿಕ್ ಜಾಮ್ ಇನ್ನಷ್ಟು ಹೆಚ್ಚಲು
ಕಾರಣವಾಯಿತು.ಬಹಲವು ದ್ವಿಚಕ್ರ ವಾಹನ ಸವಾರರು ಉರುಳಿ ಬಿದ್ದ ಘಟನೆಯು ನಡೆಯಿತು.

Related posts

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ಭಗವದ್ಗೀತೆ ಮತ್ತು ಶಿಕ್ಷಣದ ಬಗ್ಗೆ ವೀಣಾ ಬನ್ನಂಜೆ ರವರಿಂದ ವಿಶೇಷ ಉಪನ್ಯಾಸ

Suddi Udaya

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

Suddi Udaya
error: Content is protected !!