ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 14 ವರ್ಷ ಕರ್ತವ್ಯ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದ ಡಾ| ಆದಂ ಉಸ್ಮಾನ್ (61ವ) ಅಲ್ಪಕಾಲದ ಅಸೌಖ್ಯದಿಂದ ಎ.20ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಮಂಗಳೂರು ತಲಪಾಡಿ ಕೆ.ಸಿ. ರೋಡ್ ನಿವಾಸಿ. ಈ ಹಿಂದೆ ಪುತ್ತೂರು ಮತ್ತು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು.

ಮೃತರ ಅಂತ್ಯಕ್ರಿಯೆಯು ಎ.21ರಂದು ಬೆಳಿಗ್ಗೆ 5.30ಕ್ಕೆ ಅವರ ಸ್ವಂತ ಊರಾದ ಕಡಬದಲ್ಲಿ ನಡೆಯಲಿದ್ದು ಕಡಬ ಕೇಂದ್ರ ಜುಮಾ ಮಸೀದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Leave a Comment

error: Content is protected !!