ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾವೀರ ಜಯಂತಿ ಪ್ರಯುಕ್ತ ಭಗವಾನರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕಾಲೇಜು ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಮಾತನಾಡಿ, ಭಗವಾನ್ ಮಹಾವೀರರ ಆದರ್ಶಗಳನ್ನು ಪಾಲಿಸಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಎಂ, ಆಡಳಿತಾಧಿಕಾರಿ ಕೀರ್ತಿನಿಧಿ, ಆಡಳಿತ ಮಂಡಳಿಯ ಸಹನಾ ಜೈನ್, ಪ್ರಾಧ್ಯಾಪಕರು, ವಿದ್ಯಾರ್ಥಿಗಳ ಹೆತ್ತವರು, ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವ ರು ಪಾಲ್ಗೊಂಡರು.

Leave a Comment

error: Content is protected !!