March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

ಬೆಳ್ತಂಗಡಿ ಲಾಯಿಲ ಸುಬ್ರಹ್ಮಣ್ಯನಗರ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಎ.29 ರಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ರವರು ಶ್ರೀ ಚಂದ್ರಮೌಳೀಶ್ವರ ಪೂಜಾದಿಗಳನ್ನು ನೆರವೇರಿಸಿ ಆಶೀರ್ವದಿಸಲಿದ್ದಾರೆ.
ಎ.29 ರಂದು ಸಾಯಂಕಾಲ ಗಂಟೆ 6ಕ್ಕೆ ಶ್ರೀ ಜಗದ್ಗುರುಗಳ ಆಗಮನ, ಸ್ವಾಗತ, ಧೂಳಿಪಾದ ಪೂಜೆ, ಫಲಸಮರ್ಪಣೆ, ಆಶೀರ್ವಚನ
ರಾತ್ರಿ ಶ್ರೀ ಚಂದ್ರಮೌಳೀಶ್ವರ ಪೂಜೆ ಪಾದಪೂಜಾ ಸೇವೆಗಳು ನಡೆಯಲಿದೆ.

ನಂತರ ಎ.30 ರಂದು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಆಗಮಿಸಿ ಚಂಡಿಕಾ ಹೋಮದ
ಪೂರ್ಣಾಹುತಿಯನ್ನು ಸಂಪನ್ನಗೊಳಿಸಿ ಶ್ರೀ ದುರ್ಗಾಪರಮೇಶ್ವರೀ ದೇವರ ಪೂಜೆಯನ್ನು ಮಾಡಿ ಆಶೀರ್ವಚನಗಳನ್ನು ನೀಡಲಿದ್ದಾರೆ.
ಪ್ರಾತಃ 6-೦೦ ಗಂಟೆಗೆ ಶ್ರೀ ಚಂಡಿಕಾ ಹೋಮಾರಂಭ, 9 ಕ್ಕೆ ಶ್ರೀ ಜಗದ್ಗುರುಗಳ ಆಗಮನ, ಸ್ವಾಗತ, ಮೆರವಣಿಗೆ, ಚಂಡಿಕಾ ಹೋಮದ ಪೂರ್ಣಾಹುತಿ, ಶ್ರೀ ದುರ್ಗಾಪರಮೇಶ್ವರೀ ದೇವರಿಗೆ ಶ್ರೀ ಜಗದ್ಗುತುಗಳಿಂದ ಪ್ರಸನ್ನಪೂಜೆ, ಕ್ಷೇತ್ರದರ್ಶನ, ಧೂಳಿ ಪಾದಪೂಜೆ, ಫಲಸಮರ್ಪಣೆ, ಆಶೀರ್ವಚನ, ಪಾದಪೂಜಾ-ಭಿಕ್ಷಾವಂದನೆ ಸೇವೆಗಳು, ಸಮಸ್ತ ಭಕ್ತಜನರಿಗೆ
ಶ್ರೀ ಜಗದ್ಗುತುಗಳಿಂದ ಫಲಮಂತ್ರಾಕ್ಷತೆ, ನಡೆಯಲಿದೆ.

Related posts

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya
error: Content is protected !!