23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

ಕೊಕ್ಕಡ: ಮತದಾರರಿಗೆ ಮತಗಟ್ಟೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ‘ನಮ್ಮ ನಡೆ ಮತಗಟ್ಟೆ ಕಡೆʼ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗಬೇಕೆಂಬ ಆಶಯ ಹೊಂದಿದೆ. ಎಲ್ಲ ಮತಗಟ್ಟೆಗಳಲ್ಲಿಯೂ ಈ ಕಾರ್ಯಕ್ರಮ ನಡೆದಿದೆ ಎಂದು ಕೊಕ್ಕಡ ಗ್ರಾಮ ಪಂಚಾಯಿತಿನ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಹೇಳಿದರು.

ಅವರು ಏ.21 ಕೊಕ್ಕಡ ಪ್ರಾಥಮಿಕ ಶಾಲೆಯ ಚುನಾವಣಾ ಬೂತ್ ನಲ್ಲಿ ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ, ಧ್ವಜಾರೋಹಣ ಹಾಗೂ ಮತಗಟ್ಟೆ ಸುತ್ತ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭ ಸ್ತ್ರೀ ಶಕ್ತಿ ಸಂಘದ ತಾಲೂಕು ಸಂಯೋಜಕಿ ವೀಣಾ, ಕೊಕ್ಕಡ ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಮತದಾನ ಜಾಗೃತಿ ಸಮಿತಿಯವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya
error: Content is protected !!