25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

ಬೆಳ್ತಂಗಡಿ: ಯಕ್ಷ ಶಾಂತಲಾ ಎಂದೇ ಜನಪ್ರಿಯರಾಗಿದ್ದ ತೆಂಕು, ಬಡಗು ಎರಡೂ ತಿಟ್ಟಿನಲ್ಲಿ ಕಲಾವ್ಯವಸಾಯ ಮಾಡಿದ ಪ್ರಸಿದ್ಧ ಸ್ತ್ರೀವೇಷಧಾರಿ ಪಾತಾಳ ವೆಂಕಟರಮಣ ಭಟ್ ಅವರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರಶಸ್ತಿ ಪ್ರದಾನ ಎ.26 ರಂದು ಉಪ್ಪಿನಂಗಡಿಯ ಪಾತಾಳದ ದುರ್ಗಾಗಿರಿ ಭಜನ ಮಂದಿರದಲ್ಲಿ ಸುಂಕದಕಟ್ಟೆ ಮೇಳದ ವೇದಿಕೆಯಲ್ಲಿ ನಡೆಯಲಿದೆ ಎಂದು ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ಇದರ ಸಂಚಾಲಕ ಉಜಿರೆ ಅಶೋಕ್ ಭಟ್ ತಿಳಿಸಿದ್ದಾರೆ.

91ರ ಹರಯದ ಪಾತಾಳ ವೆಂಕಟರಮಣ ಭಟ್ಟರು ಕಾಂಚನ ಮೇಳ, ಸೌಕೂರು ಮೇಳ, ಮೂಲ್ಕಿ ಮೇಳ, ದೀರ್ಘಕಾಲದ ತಿರುಗಾಟ ಧರ್ಮಸ್ಥಳ ಮೇಳದಲ್ಲಿ ನಡೆಸಿದ್ದಾರೆ. ಸ್ತ್ರೀವೇಷಕ್ಕೆ ಪುರುಷವೇಷಕ್ಕೆ ಸಮದಂಡಿಯಾಗುವಂತೆ ಬೇಲೂರು ಶಿಲಾಬಾಲಿಕೆಯರ ಅಂಗಭಂಗಿಗಳನ್ನು ಸ್ವತಃ ಪರಿಶೀಲಿಸಿ ಅಧ್ಯಯನ ಮಾಡಿ ಯಕ್ಷಗಾನ ಸ್ತ್ರೀವೇಷದ ಆಹಾರ್ಯವನ್ನು ನೃತ್ಯವಿನ್ಯಾಸಕ್ಕೆ ಬೇಕಾದಂತೆ ಸಿದ್ಧಪಡಿಸಿದ ಅವರು ಸೌಂದರ್ಯ ಪ್ರಧಾನ ಸ್ತ್ರೀವೇಷದ ಬಣ್ಣಗಾರಿಕೆಯಲ್ಲೂ ಹೊಸತನದ ಆವಿಷ್ಕಾರ ತಂದಿದ್ದರು. ಮಾಯಾ ಮೋಹಿನಿ, ಮಾಯಾ ಪೂತನಿ, ಮಾಯಾ ಅಜಮುಖಿ ಮೊದಲಾದ ಮಾಯಾ ಸ್ತ್ರಿವೇಷದ ಪಾತ್ರಗಳಿಗೆ ವಿಶಿಷ್ಟ ಕಲ್ಪನೆ ನೀಡಿ ಇತರ ಸ್ತ್ರೀವೇಷಗಳಿಗಿಂತ ಭಿನ್ನ ಎಂದು ನಿರೂಪಿಸಿದ್ದರು. ಗರತಿ ಪಾತ್ರಗಳಲ್ಲಿ ಸೈ ಎನಿಸಿದ್ದರು.

ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಅಮ್ಮುದೇವಿ ಮೊದಲಾದ ಪಾತ್ರಗಳಲ್ಲಿ ಹೆಸರು ಗಳಿಸಿದ್ದರು. ರಂಭೆ, ಊರ್ವಶಿ, ಮೇನಕೆ, ಸತ್ಯಭಾಮೆ, ಸುಭದ್ರೆ, ದ್ರೌಪದಿ, ಸ್ವಯಂಪ್ರಭೆಯಂತಹ ಪಾತ್ರಗಳಲ್ಲಿ ಪರಕಾಯ ಪ್ರವೇಶದಿಂದ ಪ್ರೇಕ್ಷಕರನ್ನು ಬೆರಗಾಗಿಸಿದವರು. ಮಾಸ್ಟರ್ ವಿಠಲ ಅವರ ಶಿಷ್ಯನಾಗಿ ಭರತನಾಟ್ಯ, ಶಿವತಾಂಡವ, ಭಸ್ಮಾಸುರ ಮೋಹಿನಿಯ ನೃತ್ಯಗಳ ಪದಗತಿಯ ಅಭ್ಯಾಸ ಮಾಡಿದ್ದರು. ಮಂಕುಡೆ ಸಂಜೀವ, ಕೋಳ್ಯೂರು ರಾಮಚಂದ್ರ ರಾವ್, ಕರ್ಗಲ್ಲು ಸುಬ್ಬಣ್ಣ ಭಟ್ ಮೊದಲಾದವರ ಸಾಲಿನಲ್ಲಿ ಗುರುತಿಸಿಕೊಂಡವರು. ಯಕ್ಷಗಾನದಿಂದ ದೊರೆತ ಆರ್ಥಿಕ ಸಂಪಾದನೆಯನ್ನು ಈವರೆಗೆ 50 ಮಂದಿ ಕಲಾವಿದರಿಗೆ ತಲಾ 10 ಸಾವಿರ ರೂ.ಗಳಂತೆ ನೀಡಿ ಸಮ್ಮಾನಿಸಿದವರು.

Related posts

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ರೆಖ್ಯ ಗ್ರಾಮದ ಸರ್ವೆ ನಂ:69/1 ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ನಡೆಸಿದ ಜಂಟಿ ಸರ್ವೆ ಪೂರ್ಣ: ಸೂಕ್ತ ಆದೇಶ ನೀಡುವಂತೆ ಶಾಸಕ ಹರೀಶ್ ಪೂಂಜರಿಂದ ಸಚಿವ ಈಶ್ವರ ಖಂಡ್ರೆರವರಿಗೆ ಮನವಿ

Suddi Udaya

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

Suddi Udaya
error: Content is protected !!