30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

ಅಳದಂಗಡಿ : ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ), ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿಯು ಇತ್ತೀಚೆಗ ಅಳದಂಗಡಿ ಸೊಸೈಟಿಯಲ್ಲಿ ನಡೆಯಿತು.

ಜೆಸಿಐ ಭಾರತದ ರಾಷ್ಟ್ರೀಯ ತರಬೇತಿದಾರರಾದ ಜೆಸಿ ಸುಧಾಕರ್ ಪೂಜಾರಿ ಕಾರ್ಕಳ ಇವರು ಸಂಘದ ಸಿಬ್ಬಂದಿಗಳಿಗೆ ಉದ್ಯೋಗ ಕೌಶಲ್ಯದ ಬಗ್ಗೆ ತರಬೇತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಾಕೇಶ್ ಹೆಗ್ಡೆ ವಹಿಸಿ ಸ್ವಾಗತಿಸಿದರು ಮತ್ತು ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ವಾಚಿಸಿದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್ ಡಿ, ಹಾಗೂ ಪದಾಧಿಕಾರಿಗಳು ಮತ್ತು ಸೊಸೈಟಿಯ ನಿರ್ದೇಶಕರುಗಳು ಉಪಸ್ಥಿತರಿದ್ದರು.

ಸಂಘದ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಮೀರಾ ಇವರು ಧನ್ಯವಾದಗಳು ಸಲ್ಲಿಸಿದರು. ಅತ್ಯುತ್ತಮ ತರಬೇತಿಯನ್ನು ನೀಡಿದ ಸಂಪನ್ಮೂಲ ವ್ಯಕ್ತಿಯಾದ ಸುಧಾಕರ್ ಪೂಜಾರಿಯವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya
error: Content is protected !!