September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

ಅಳದಂಗಡಿ : ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ), ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿಯು ಇತ್ತೀಚೆಗ ಅಳದಂಗಡಿ ಸೊಸೈಟಿಯಲ್ಲಿ ನಡೆಯಿತು.

ಜೆಸಿಐ ಭಾರತದ ರಾಷ್ಟ್ರೀಯ ತರಬೇತಿದಾರರಾದ ಜೆಸಿ ಸುಧಾಕರ್ ಪೂಜಾರಿ ಕಾರ್ಕಳ ಇವರು ಸಂಘದ ಸಿಬ್ಬಂದಿಗಳಿಗೆ ಉದ್ಯೋಗ ಕೌಶಲ್ಯದ ಬಗ್ಗೆ ತರಬೇತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಾಕೇಶ್ ಹೆಗ್ಡೆ ವಹಿಸಿ ಸ್ವಾಗತಿಸಿದರು ಮತ್ತು ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ವಾಚಿಸಿದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್ ಡಿ, ಹಾಗೂ ಪದಾಧಿಕಾರಿಗಳು ಮತ್ತು ಸೊಸೈಟಿಯ ನಿರ್ದೇಶಕರುಗಳು ಉಪಸ್ಥಿತರಿದ್ದರು.

ಸಂಘದ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಮೀರಾ ಇವರು ಧನ್ಯವಾದಗಳು ಸಲ್ಲಿಸಿದರು. ಅತ್ಯುತ್ತಮ ತರಬೇತಿಯನ್ನು ನೀಡಿದ ಸಂಪನ್ಮೂಲ ವ್ಯಕ್ತಿಯಾದ ಸುಧಾಕರ್ ಪೂಜಾರಿಯವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.

Related posts

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನ ನೂತನ ಮೂರ್ತಿ ಮೆರವಣಿಗೆ,ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರೆವಣಿಗೆ- ತೋರಣ ಮುಹೂರ್ತ, ಭಜನಾ ಕಾರ್ಯಕ್ರಮಕ್ಕೆ ಚಾಲನೆ-ಸಹಸ್ರಾರು ಭಕ್ತರು ಭಾಗಿ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya
error: Content is protected !!