April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

ಬೆಳ್ತಂಗಡಿ ಲಾಯಿಲ ಸುಬ್ರಹ್ಮಣ್ಯನಗರ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಎ.29 ರಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ರವರು ಶ್ರೀ ಚಂದ್ರಮೌಳೀಶ್ವರ ಪೂಜಾದಿಗಳನ್ನು ನೆರವೇರಿಸಿ ಆಶೀರ್ವದಿಸಲಿದ್ದಾರೆ.
ಎ.29 ರಂದು ಸಾಯಂಕಾಲ ಗಂಟೆ 6ಕ್ಕೆ ಶ್ರೀ ಜಗದ್ಗುರುಗಳ ಆಗಮನ, ಸ್ವಾಗತ, ಧೂಳಿಪಾದ ಪೂಜೆ, ಫಲಸಮರ್ಪಣೆ, ಆಶೀರ್ವಚನ
ರಾತ್ರಿ ಶ್ರೀ ಚಂದ್ರಮೌಳೀಶ್ವರ ಪೂಜೆ ಪಾದಪೂಜಾ ಸೇವೆಗಳು ನಡೆಯಲಿದೆ.

ನಂತರ ಎ.30 ರಂದು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಆಗಮಿಸಿ ಚಂಡಿಕಾ ಹೋಮದ
ಪೂರ್ಣಾಹುತಿಯನ್ನು ಸಂಪನ್ನಗೊಳಿಸಿ ಶ್ರೀ ದುರ್ಗಾಪರಮೇಶ್ವರೀ ದೇವರ ಪೂಜೆಯನ್ನು ಮಾಡಿ ಆಶೀರ್ವಚನಗಳನ್ನು ನೀಡಲಿದ್ದಾರೆ.
ಪ್ರಾತಃ 6-೦೦ ಗಂಟೆಗೆ ಶ್ರೀ ಚಂಡಿಕಾ ಹೋಮಾರಂಭ, 9 ಕ್ಕೆ ಶ್ರೀ ಜಗದ್ಗುರುಗಳ ಆಗಮನ, ಸ್ವಾಗತ, ಮೆರವಣಿಗೆ, ಚಂಡಿಕಾ ಹೋಮದ ಪೂರ್ಣಾಹುತಿ, ಶ್ರೀ ದುರ್ಗಾಪರಮೇಶ್ವರೀ ದೇವರಿಗೆ ಶ್ರೀ ಜಗದ್ಗುತುಗಳಿಂದ ಪ್ರಸನ್ನಪೂಜೆ, ಕ್ಷೇತ್ರದರ್ಶನ, ಧೂಳಿ ಪಾದಪೂಜೆ, ಫಲಸಮರ್ಪಣೆ, ಆಶೀರ್ವಚನ, ಪಾದಪೂಜಾ-ಭಿಕ್ಷಾವಂದನೆ ಸೇವೆಗಳು, ಸಮಸ್ತ ಭಕ್ತಜನರಿಗೆ
ಶ್ರೀ ಜಗದ್ಗುತುಗಳಿಂದ ಫಲಮಂತ್ರಾಕ್ಷತೆ, ನಡೆಯಲಿದೆ.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿಯ ಸಮಾರೋಪ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ